ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm