ಬ್ರೇಕಿಂಗ್ ನ್ಯೂಸ್
10-08-20 12:31 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಕೊರೊನಾ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೋಂಕು ಮೆಟ್ಟಿ ನಿಂತು ಸಾಧನೆ ಮಾಡಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ಬಾರಿ ಮೊದಲ ಸಾಲಿನಲ್ಲಿರುತ್ತಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7 ಮತ್ತು 12ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ವಿಶೇಷ ಅಂದರೆ ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ರಾಜ್ಯದಲ್ಲಿ ಆರು ಮಂದಿ ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಶಾಲೆಯ ಅನುಷ್ ಕೂಡ ಸೇರಿದ್ದಾನೆ. ಇತರೇ ಆರು ವಿದ್ಯಾರ್ಥಿಗಳ ಜೊತೆ ಅನುಷ್ ಕೂಡ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಸಾಧನೆ ಮಾಡಿದ್ದಾನೆ. ಅನುಷ್, ಬಳ್ಪ ಗ್ರಾಮದ ಲೋಕೇಶ್ ಮತ್ತು ಉಷಾ ದಂಪತಿಯ ಪುತ್ರನಾಗಿದ್ದು ರಾಜ್ಯಕ್ಕೆ ಟಾಪರ್ ಆಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ.
ಇನ್ನು 624 ಅಂಕ ಗಳಿಸಿದವರಲ್ಲಿ 11 ಮಂದಿ ಇದ್ದಾರೆ. ವಿಟ್ಲದ ಅಳಿಕೆಯ ಸತ್ಯಸಾಯಿ ಲೋಕಸೇವಾ ಶಾಲೆಯ ಸುಮುಖ, ಮಂಗಳೂರಿನ ಕೆನರಾ ಹೈಸ್ಕೂಲಿನ ನಿಧಿ ರಾವ್, ಉಡುಪಿ ಜಿಲ್ಲೆಯ ಬೈಂದೂರಿನ ಸಾಂದೀಪನಿ ಶಾಲೆಯ ಸುರಭಿ ಎಸ್. ಶೆಟ್ಟಿ 624 ಅಂಕದ ಸಾಧನೆ ಮಾಡಿದವರಲ್ಲಿದ್ದಾರೆ.
623 ಮಂದಿ ಅಂಕ ಗಳಿಸಿದವರಲ್ಲಿ ಮೂವರಿದ್ದಾರೆ. ಇನ್ನು 622 ಅಂಕ ಗಳಿಸಿದವರಲ್ಲೂ ಮೂರು ಮಂದಿ ಇದ್ದಾರೆ. 622 ಅಂಕದ ಗಳಿಕೆಯಲ್ಲಿ ಮೂಡುಬಿದ್ರೆಯ ಆಳ್ವಾಸ್ ಪ್ರೌಢಶಾಲೆಯ ಇಬ್ಬರಿದ್ದು ಪ್ರಕೃತಿ ಪ್ರಿಯ ಮತ್ತು ಸಮ್ಮದ್ ಮಹಾವೀರ್ ಈ ಸಾಧನೆ ಮಾಡಿದ್ದಾರೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm