ಬ್ರೇಕಿಂಗ್ ನ್ಯೂಸ್
13-07-25 11:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿಯಾದ ಸುಮಿತ್ರಾ (46) ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ.
ಸುಮಿತ್ರಾ ಅವರು ಜುಲೈ 3ರಂದು ಕೆಲಸಕ್ಕೆಂದು ಕುಲ್ಕುಂದದಿಂದ ಮರ್ಧಾಳ ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಕಂಬ ಬಳಿ ರಿಕ್ಷಾ ಪಲ್ಟಿಯಾಗಿ ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ರಿಕ್ಷಾದ ಹಿಂಬದಿ ಕುಳಿತಿದ್ದ ಅವರ ತಲೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ತಕ್ಷಣವೇ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ 108 ಆಂಬುಲೆನ್ಸ್ ಮೂಲಕ ಪುತ್ತೂರು ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ, ನಂತರ ಮಂಗಳೂರಿನ ಅಂಬೇಡ್ಕರ್ ವೃತ್ತದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಅವರಿಗೆ ತಲೆಯ ಭಾಗದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮುಂದೆಯೂ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಒಟ್ಟು ವೆಚ್ಚ ಸುಮಾರು 15 ಲಕ್ಷ ರೂ.ಗೂ ಹೆಚ್ಚು ಆಗಬಹುದೆಂದು ವೈದ್ಯರು ತಿಳಿಸಿದ್ದಾರೆ. ಸುಮಿತ್ರಾ ಅವರ ಕುಟುಂಬವು ಆರ್ಥಿಕವಾಗಿ ದುರ್ಬಲವಾಗಿದ್ದು, ಯಾವುದೇ ಕೃಷಿ ಅಥವಾ ಇತರ ಆದಾಯದ ಮೂಲ ಇರುವುದಿಲ್ಲ. ಇವರ ಪತಿ ಟೈಲರ್ ವೃತ್ತಿ ಮಾಡುತ್ತಿದ್ದು, ಇತ್ತೀಚೆಗೆ ಅವರಿಗೆ ಬೆನ್ನುಮೂಳೆಯ ಸಮಸ್ಯೆಯಿಂದ ಮನೆ ಖರ್ಚು ಹಾಗೂ ಮಕ್ಕಳ ವಿದ್ಯಾಭ್ಯಾಸದ ಖರ್ಚು ಎಲ್ಲವೂ ಸುಮಿತ್ರಾ ಅವರ ಮೇಲಿತ್ತು.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆ ಮತ್ತು ಚಿಕಿತ್ಸಾ ವೆಚ್ಚವನ್ನು ಭರಿಸುವುದು ಈ ಕುಟುಂಬಕ್ಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಹೃದಯಿ ದಾನಿಗಳು ಅಮ್ಮನ ಚಿಕಿತ್ಸೆಗೆ ನೆರವಾಗುವಂತೆ ಸುಮಿತ್ರಾ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ. ಮಾಹಿತಿಗೆ ಶ್ರೇಯಸ್ (ದೂ. 9108243172) ಅವರನ್ನು ಸಂಪರ್ಕಿಸಬಹುದು.
ನೆರವು ನೀಡುವವರು ಸುಮಿತ್ರಾ ಅವರ ಪುತ್ರಿ ಶ್ರೇಯಾ ಕೆ.ಬಿ. ಅವರ ಬ್ಯಾಂಕ್ ಖಾತೆಗೆ ಹಣ ನೀಡಬಹುದು.
Bank of Baroda -ಸುಬ್ರಹ್ಮಣ್ಯ ಶಾಖೆ, ಅಕೌಂಟ್ ನಂಬರ್: 70570100004654
IFSC: BARB0VJSUBR
ಗೂಗಲ್ ಪೇ ನಂಬರ್: 9743203656
A family from Subrahmanya is pleading for financial help after a tragic road accident left 46-year-old Sumithra with a serious head injury. She is currently undergoing intensive treatment at KMC Hospital in Mangaluru and requires urgent brain surgery, with medical expenses estimated to exceed ₹15 lakh.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm