ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am