ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am