ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm