ಬ್ರೇಕಿಂಗ್ ನ್ಯೂಸ್
21-07-25 04:03 am Mangaluru Correspondent ಕರಾವಳಿ
ಮಂಗಳೂರು, ಜುಲೈ 21: ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಮೇಲೆ ಕೇಳಿಬಂದ ಆರೋಪ, ವಿವಾದಗಳ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಷ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಎಸ್ಐಟಿ ತನಿಖೆ ಕುರಿತು ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದು ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 'ಹಲವಾರು ಶವಗಳನ್ನು ಹೂತಿದ್ದೆ' ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ 'ಸತ್ಯ'. ಹೀಗಾಗಿ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಹೊರತರಬೇಕಿದೆ. ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ.ಪಾರ್ಶ್ವನಾಥ್ ಜೈನ್ ಆಗ್ರಹಿಸಿದ್ದಾರೆ.
ಪದೇ ಪದೇ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸಗಳು ನಡೆಯುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇದರ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಧರ್ಮಸ್ಥಳ ಆಗ್ರಹಿಸುತ್ತಿದೆ ಎಂದಿದ್ದಾರೆ.
Sri Kshetra Dharmasthala has welcomed the Karnataka government’s decision to constitute a Special Investigation Team (SIT) to probe the recent allegations and controversies surrounding the temple town. In an official statement released on behalf of the institution, the management expressed hope that the SIT will conduct an impartial and transparent investigation to uncover the truth and present it before the public.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm