ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am