ಬ್ರೇಕಿಂಗ್ ನ್ಯೂಸ್
23-07-25 10:25 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ಇತ್ತೀಚೆಗೆ ಜೈಲಿನಲ್ಲಿ ಸಹ ಕೈದಿಯೊಬ್ಬನಿಗೆ ಮೂವರು ಕೈದಿಗಳು ಸೇರಿ ಹೊಡೆದು ಹಲ್ಲೆ ಮಾಡಿದ್ದಲ್ಲದೆ, ಆತನಿಗೆ ಒತ್ತಡ ಹೇರಿ ಹಫ್ತಾ ವಸೂಲಿ ಮಾಡಿದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೈಲು ಒಳಗಡೆಯೇ ಹಫ್ತಾ ವಸೂಲಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಆರೋಪಿತ ನಾಲ್ವರು ಕೈದಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಭಾಗದ ಕ್ರಿಮಿನಲ್ ಗಳಾದ ಧನುಷ್ ಭಂಡಾರಿ ಅಲಿಯಾಸ್ ಧನು, ದಿಲೇಶ್ ಬಂಗೇರ, ಲಾಯ್ ವೇಗಸ್, ಸಚಿನ್ ತಲಪಾಡಿ ಎಂಬ ನಾಲ್ವರು ಕೈದಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 308(4) ಮತ್ತು 395) ಪ್ರಕಾರ ಜೈಲಿನೊಳಗಡೆ ಹಫ್ತಾ ವಸೂಲಿ ಮಾಡಿದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಇವರು ಹಲ್ಲೆ ಮಾಡಿದ್ದಲ್ಲದೆ, ವಿಧೇಯ ಕೈದಿಯೊಬ್ಬನಿಗೆ ಒತ್ತಡ ಹೇರಿ ಆತನ ಪತ್ನಿಯ ಮೂಲಕ 20 ಸಾವಿರ ರೂ. ವಸೂಲಿ ಮಾಡಿದ್ದರು. ಕೈದಿ ತನ್ನ ಪತ್ನಿಗೆ ಹೇಳಿ, ಆರೋಪಿತರು ಸೂಚಿಸಿದ್ದ ಗೂಗಲ್ ಪೇ ನಂಬರಿಗೆ 20 ಸಾವಿರ ರೂಪಾಯಿ ಹಾಕಿಸಿದ್ದ.
ಇತ್ತೀಚೆಗೆ ಎಸಿಪಿ ನೇತೃತ್ವದ ಪೊಲೀಸರು ಜೈಲು ತಪಾಸಣೆ ಸಂದರ್ಭದಲ್ಲಿ ಶೋಷಣೆಗೊಳಗಾದ ಕೈದಿ ಸ್ವತಃ ಈ ಬಗ್ಗೆ ದೂರು ಹೇಳಿಕೊಂಡಿದ್ದು, 20 ಸಾವಿರ ರೂ. ಮೊತ್ತವನ್ನು ಪತ್ನಿಯ ಮೂಲಕ ಹಾಕಿಸಿದ್ದಾಗಿಯೂ ತಿಳಿಸಿದ್ದ. ಈ ವಿಚಾರದಲ್ಲಿ ಬರ್ಕೆ ಠಾಣೆಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಇದಲ್ಲದೆ, ಆರೋಪಿಗಳು ಈಗಾಗಲೇ ಒಂದು ಕೇಸಿನಲ್ಲಿ ಜೈಲಿನಲ್ಲಿದ್ದು, ಒಂದಕ್ಕಿಂತ ಹೆಚ್ಚು ಕೇಸಿನಲ್ಲಿ ಭಾಗಿಯಾಗಿ ಕೂಟ ಕಟ್ಟಿಕೊಂಡು ಅಪರಾಧ ಎಸಗುತ್ತಿದ್ದರೆ ಅಂತಹವರ ಮೇಲೆ ಕೋಕಾ ಕಾಯ್ದೆ ಹೇರಬಹುದಾಗಿದೆ. ಸಂಘಟಿತ ಅಪರಾಧ ಚಟುವಟಿಕೆ, ಕಾನೂನು ವಿರೋಧಿ ಕೃತ್ಯ ನಡೆಸುತ್ತಿದ್ದಾರೆಂಬ ನೆಲೆಯಲ್ಲಿ ಕೆ.-ಕೋಕಾ ಕಾಯ್ದೆಯಡಿ ನಾಲ್ವರ ವಿರುದ್ಧವೂ ಕೇಸು ದಾಖಲಿಸಲಾಗಿದೆ.
ಕೋಕಾ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 5 ವರ್ಷ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶ ಇದೆ. ಇವರ ಕೃತ್ಯದಿಂದಾಗಿ ಸಂತ್ರಸ್ತರು ಮೃತಪಟ್ಟರೆ ಆರೋಪಿಗಳಿಗೆ ಜೀವಾವಧಿ ಅಥವಾ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ. ಸಂಘಟಿತ ಅಪರಾಧ ಕೃತ್ಯದಲ್ಲಿ ಯಾವುದೇ ವ್ಯಕ್ತಿ ಭಾಗಿಯಾಗಿದ್ದಾನೆ ಅಂದರೂ, ಆತ ಇನ್ನಾವುದೇ ಕೇಸಿನಲ್ಲಿ ಇಲ್ಲದಿದ್ದರೂ ಅವರಿಗೆ 5 ವರ್ಷ ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. ಈ ಪ್ರಕರಣವನ್ನು ಡಿಎಸ್ಪಿ ದರ್ಜೆಯ ಅಧಿಕಾರಿ ತನಿಖೆ ನಡೆಸಬೇಕೆಂಬ ನಿಯಮವಿದ್ದು ಇದರಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
In a shocking incident reported from a Mangaluru prison, four inmates have been booked under the stringent Karnataka Control of Organised Crimes Act (KCOCA) for allegedly assaulting and extorting money from a fellow inmate. The accused reportedly forced the victim to make a payment of ₹20,000 through Google Pay via his wife.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm