ಬ್ರೇಕಿಂಗ್ ನ್ಯೂಸ್
26-07-25 04:38 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಲೇಖಕಿ ಮತ್ತು ಮಂಗಳೂರಿನಲ್ಲಿ ವೃತ್ತಿಯಲ್ಲಿ ವಕೀಲೆಯಾಗಿದ್ದ ಬಂಟ್ವಾಳ ಮೂಲದ ರಾಜಶ್ರೀ ಜೆ. ಪೂಜಾರಿ (25) ಅಪರೂಪದ ಬೆನ್ನು ಹುರಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಂಟ್ವಾಳದಲ್ಲಿ ಬಡ ಕುಟುಂಬದ ಹಿನ್ನೆಲೆಯ ರಾಜಶ್ರೀ ಪೂಜಾರಿ ಸಣ್ಣ ವಯಸ್ಸಿನಲ್ಲೇ ಗಮನಾರ್ಹ ಸಾಧನೆ ಮಾಡಿದ್ದರು. ಬಂಟ್ವಾಳದಲ್ಲಿ ಪ್ರಾಥಮಿಕ ಶಿಕ್ಷಣ, ಪೆರ್ಮುದೆ ಎಕ್ಕಾರಿನಲ್ಲಿ ಪ್ರೌಢಶಾಲೆ, ಕಟೀಲು ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಬಳಿಕ ಕಾನೂನು ಶಿಕ್ಷಣವನ್ನು ಮಂಗಳೂರಿನ ಎಸ್ಡಿಎಂ ಕಾಲೇಜಿನಲ್ಲಿ ಪಡೆದಿದ್ದರು. ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿಯಲ್ಲಿದ್ದರು. ಶಾಲಾ ಹಂತದಲ್ಲಿಯೇ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿ ಹಲವು ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು.
ನಿರೂಪಣೆ, ಕ್ವಿಜ್ ಸ್ಪರ್ಧೆಗಳನ್ನು ಏರ್ಪಡಿಸುವುದು, ತುಳು ಪರಿಷತ್ ನಲ್ಲಿ ತೊಡಗಿಸಿ ಸಾಹಿತ್ಯ, ಸಂಘಟನೆ, ಆಕಾಶವಾಣಿ ಇನ್ನಿತರ ಮಾಧ್ಯಮಗಳಲ್ಲಿ ಕವನವಾಚನ ಚರ್ಚಾ ಕೂಟಗಳಲ್ಲಿ ಭಾಗವಹಿಸಿದ್ದರು. ಫೇಸ್ಬುಕ್ ಜಾಲತಾಣದಲ್ಲಿ ಪ್ರತಿ ಶನಿವಾರ ಸಂಜೆ 5 ಗಂಟೆಗೆ ಕತೆತ ಕದಿಕೆ ಎಂಬ ಹೆಸರಿನಲ್ಲಿ ತುಳು ಕತೆ ವಾಚನ ಮಾಡುತ್ತಿದ್ದರು. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸುಮ್ಮನೆ ಕೂರಬಾರದು ಅಂತ ಯೋಚಿಸಿ ಜಾಲತಾಣದಲ್ಲಿಯೇ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ನೂರು ಸರಣಿಗಳನ್ನು ಪೂರೈಸಿದ್ದರು.
ಇಂಥ ಬಹುಮುಖ ಪ್ರತಿಭೆಯ ಯುವ ವಕೀಲೆಯಾಗಿದ್ದ ರಾಜಶ್ರೀಗೆ ಇತ್ತೀಚಿಗೆ ಬೆನ್ನುಹುರಿಯಲ್ಲಿ ಸಮಸ್ಯೆ ಎದುರಾಗಿತ್ತು. ಮಂಗಳೂರಿನ ವಕೀಲ ಜಗದೀಶ್ ಕೆ.ಆರ್ ಅವರ ಜೊತೆಗೆ ಜೂನಿಯರ್ ಆಗಿದ್ದ ಈಕೆಯನ್ನು 15 ದಿನಗಳ ಹಿಂದೆ ಯೇನಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ನಾಲ್ಕು ಲಕ್ಷ ಆಗುತ್ತೆ, ಸಹಾಯ ಮಾಡುವಂತೆಯೂ ಜೊತೆಗಿದ್ದವರು ಕೇಳಿಕೊಂಡಿದ್ದರು. ಆದರೆ ಆಪರೇಶನ್ ಆಗಿ ಮನೆಗೆ ತೆರಳಿದ್ದ ಅವರಿಗೆ ಮತ್ತೆ ಅನಾರೋಗ್ಯ ಉಂಟಾಗಿ ಇಹಲೋಕ ತ್ಯಜಿಸಿದ್ದಾರೆ. ಎಕ್ಕಾರು ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಸೋದರ ಇದ್ದಾರೆ. ಕಲೆ, ಸಾಹಿತ್ಯ ಚಟುವಟಿಕೆಗಾಗಿ ರಾಜಶ್ರೀಗೆ ಕನ್ನಡ ಕುವರಿ, ಕನ್ನಡ ಧ್ವನಿ, ಬುಕ್ ಬ್ರಹ್ಮ ಪ್ರಶಸ್ತಿಗಳು ಸಿಕ್ಕಿದ್ದವು.
In a deeply saddening development, Rajashree Jayaraj Poojary, a promising young writer, lawyer, and cultural enthusiast, passed away following health complications. Hailing from Bantwal, Rajashree was known for her literary talent, humility, and multifaceted contributions to arts, literature, and society.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm