ಬ್ರೇಕಿಂಗ್ ನ್ಯೂಸ್
26-07-25 10:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ವ್ಯಕ್ತಿಯನ್ನು ಎಸ್ಐಟಿ ತಂಡದ ಅಧಿಕಾರಿಗಳು ಮಂಗಳೂರಿನಲ್ಲಿ ಸುದೀರ್ಘ 9 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದ ಡಿಐಜಿ ಎಂ.ಎನ್ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ವಿಚಾರಣೆ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ವೇಳೆಗೆ ತನ್ನ ವಕೀಲರ ಜೊತೆಗೆ ಟ್ಯಾಕ್ಸಿ ಕಾರಿನಲ್ಲಿ ಮುಸುಕು ಹಾಕ್ಕೊಂಡಿದ್ದ ವ್ಯಕ್ತಿ ವಿಚಾರಣೆಗೆ ಬಂದಿದ್ದು, ಮುಸುಕು ಹಾಕ್ಕೊಂಡೇ ಐಬಿ ಬಂಗಲೆಯ ಒಳಗಡೆ ತೆರಳಿದ್ದಾರೆ.


ಕಟ್ಟಡದ ಹೊರಗಡೆ ಕಾದಿದ್ದ ಮಾಧ್ಯಮದವರನ್ನು ಅದಕ್ಕೂ ಮೊದಲೇ ಪೊಲೀಸರು ಐಬಿ ಬಂಗಲೆಯ ಗೇಟ್ ಹೊರಭಾಗಕ್ಕೆ ಕಳುಹಿಸಿದ್ದರು. ಹೀಗಾಗಿ ಮುಸುಕುಧಾರಿ ವ್ಯಕ್ತಿ ಕಾರಿನಲ್ಲಿ ಹೊರಗಿನಿಂದ ಒಳಗಡೆ ಹೋಗುವುದಷ್ಟೇ ಅಲ್ಲಿದ್ದ ಪತ್ರಕರ್ತರ ಕ್ಯಾಮರಾ ಕಣ್ಣಿಗೆ ಸೆರೆಯಾಗಿತ್ತು. ಆನಂತರ, ವಿಚಾರಣೆ ಮುಗಿಸಿ ಹೊರಬರುತ್ತಾರೆಂದು ಕಾದರೂ ಹೊರಗಡೆ ಬರಲಿಲ್ಲ. ಐಬಿ ಬಂಗಲೆಯ ಒಳಗೆ ಹೊರಗಿನಿಂದಲೇ ಊಟ, ತಿಂಡಿ ತರಿಸಿಕೊಂಡಿದ್ದಾರೆ.



ಸಂಜೆ 7.30ರ ವೇಳೆಗೆ ಮುಸುಕುಧಾರಿ ವ್ಯಕ್ತಿ ಮತ್ತು ಆತನ ಜೊತೆಗಿದ್ದ ವಕೀಲರು ವಿಚಾರಣೆ ಮುಗಿಸಿ ಹಿಂದಕ್ಕೆ ತೆರಳಿದ್ದಾರೆ. ಅಂದಾಜು ಸುದೀರ್ಘ 9 ಗಂಟೆ ಕಾಲ ವಿಚಾರಣೆ ನಡೆಸಿದ್ದು, ಹೆಣಗಳನ್ನು ಹೂತು ಹಾಕಿದ್ದು, ಅದಕ್ಕೆ ಕಾರಣವಾದ ಅಂಶಗಳು, ಯಾವಾಗೆಲ್ಲ ಹೆಣಗಳನ್ನು ಹೂಳಲಾಗಿತ್ತು, ಅದು ಯಾರದ್ದಿತ್ತು ಇತ್ಯಾದಿ ವಿಚಾರಗಳ ಕುರಿತು ವಿಚಾರಣೆ ವೇಳೆ ಮಾಹಿತಿಗಳನ್ನು ಸಂಗ್ರಹಿಸಿರುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ಜೊತೆಗಿದ್ದ ವಕೀಲರಾಗಲೀ, ಪೊಲೀಸ್ ಅಧಿಕಾರಿಗಳಾಗಲೀ ಮಾಹಿತಿ ಬಿಟ್ಟುಕೊಟ್ಟಿಲ್ಲ. ಶುಕ್ರವಾರ ರಾತ್ರಿ ಧರ್ಮಸ್ಥಳ ಠಾಣೆಗೆ ತೆರಳಿದ್ದ ಎಸ್ಪಿ ಜಿತೇಂದ್ರ ದಯಾಮ ಅವರು ಪ್ರಕರಣ ಕುರಿತ ಫೈಲ್ ಗಳನ್ನು ಪಡೆದಿದ್ದು, ರಾತ್ರಿಯೇ ಅಲ್ಲಿಂದ ತೆರಳಿದ್ದರು. ಈ ನಡುವೆ, ಎಸ್ಐಟಿ ತಂಡಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆ ಪಕ್ಕದಲ್ಲಿ ಕಚೇರಿ ತೆರೆದಿದ್ದು ಅದಿನ್ನೂ ಆರಂಭವಾಗಿಲ್ಲ.
The man who recently triggered a sensation by claiming to have buried hundreds of bodies in Dharmasthala was subjected to an intense 9-hour interrogation by the Special Investigation Team (SIT) in Mangaluru on Saturday. The questioning took place at the IB Guest House in Mallikatte, where DIG M.N. Anucheth and SP Jitendra Dayama of the SIT conducted the probe
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm