ಬ್ರೇಕಿಂಗ್ ನ್ಯೂಸ್
27-07-25 07:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ ನ್ಯಾಯಯುತ ತನಿಖೆ ನಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನ ಆಗ್ರಹಿಸಿತು.
ನಗರದಲ್ಲಿ ಭಾನುವಾರ ನಡೆದ ಸಮ್ಮೇಳನದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಈಶ್ವರಿ ಬಳ್ಳುಂಜ ನಿರ್ಣಯ ಮಂಡಿಸಿದರು. ಅಧ್ಯಕ್ಷೆ ಜಯಂತಿ ಬಿ.ಶೆಟ್ಟಿ ಅನುಮೋದಿಸಿದರು. ಸಭಿಕರು ಚಪ್ಪಾಳೆ ತಟ್ಟಿ ನಿರ್ಣಯವನ್ನು ಬೆಂಬಲಿಸಿದರು.
'ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾದ ಹಲವಾರು ಅಪರಿಚಿತ ಹೆಣ್ಣುಮಕ್ಕಳ ಜರ್ಜೆರಿತ ಮೃತದೇಹಗಳನ್ನು ನನ್ನಿಂದ ಬಲವಂತವಾಗಿ ಮಣ್ಣು ಮಾಡಿಸಿದ್ದಾರೆ' ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿದ್ದುದಾಗಿ ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಹೇಳಿದ ನಂತರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಹೆಣ್ಣುಮಕ್ಕಳ ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ' ಎಂದು ನಿರ್ಣಯದಲ್ಲಿ ಹೇಳಲಾಗಿದೆ.
'ಸಾರ್ವಜನಿಕರ ಒತ್ತಡದ ನಂತರ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಆಗಿದೆ. ಇದರಿಂದ ಜನರಲ್ಲಿ ಆಶಾಭಾವ ಮೂಡಿದೆ. ಆದರೆ ಆಡಳಿತ ಮತ್ತು ವಿರೋಧ ಪಕ್ಷಗಳು ಪ್ರಕರಣದ ಕುರಿತು ವ್ಯಕ್ತಪಡಿಸುತ್ತಿರುವ ನಿಲುವುಗಳನ್ನು ಗಮನಿಸಿದರೆ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಆತಂಕ ಸಂದೇಹ ಮೂಡಿದೆ' ಎಂಬ ಅಭಿಪ್ರಾಯ ನಿರ್ಣಯದಲ್ಲಿ ವ್ಯಕ್ತವಾಯಿತು.
ಜನರಲ್ಲಿ ಮೂಡಿರುವ ಆತಂಕಗಳನ್ನು ಗಮನಿಸಿ ಸರ್ಕಾರ ವಿಶೇಷ ತಂಡಕ್ಕೆ ಮುಕ್ತ ಅವಕಾಶ ನೀಡಿ, ನ್ಯಾಯಯುತ ತನಿಖೆ ನಡೆಯುವುದಾಗಿ ಖಾತರಿಪಡಿಸಬೇಕು. ಸಾಕ್ಷಿ ಮತ್ತು ಅವರ ಪರವಾದ ವಕೀಲರಿಗೆ ಗರಿಷ್ಠ ಭದ್ರತೆ ಒದಗಿಸಬೇಕು. ಹೆಣ ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಮಾತ್ರ ತನಿಖೆಯನ್ನು ಸೀಮಿತಗೊಳೊಸದೆ 80ರ ದಶಕದಲ್ಲಿ ಅಪಹರಣಕ್ಕೆ ಒಳಗಾಗಿ ಕೊಲೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ, ಪತ್ತೆಹಚ್ಚಲಾಗದ ಪ್ರಕರಣ ಎಂದು ಷರಾ ಬರೆದಿರುವ ವಿದ್ಯಾರ್ಥಿನಿ ಪದ್ಮಲತಾ, ಸೌಜನ್ಯಾ ಪ್ರಕರಣ, ಮಾವುತ ನಾರಾಯಣ ಅವರ ಸಹೋದರಿ ಯಮುನಾ ಕೊಲೆ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು' ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.
A renewed demand for a thorough reinvestigation into a series of mysterious and unnatural deaths of women in Dharmasthala village—including those of Padmalatha, Vedavalli, Sowjanya, and Yamuna—has been voiced by the All India Democratic Women’s Association (AIDWA). The organization has urged the government to ensure a transparent probe by the newly formed Special Investigation Team (SIT).
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm