ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 02:36 pm
Mangalore Correspondent
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm