ಬ್ರೇಕಿಂಗ್ ನ್ಯೂಸ್
31-07-25 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಪ್ರತಿನಿಧಿಗಳಿಗಾಗಿ ಜುಲೈ 28ರಿಂದ ತೊಡಗಿ ಆಗಸ್ಟ್ 1ರ ವರೆಗೆ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ HDR ಬ್ರಾಕಿಥೆರಪಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಕಮಾಂಡ್ ಆಸ್ಪತ್ರೆ (ಬೆಂಗಳೂರು), ಐಎನ್ಎಚ್ಎಸ್ ಅಶ್ವಿನಿ (ಮುಂಬೈ), ಕಮಾಂಡ್ ಆಸ್ಪತ್ರೆ (ಲಕ್ಷ್ಮಿ) ಮತ್ತು ಕಮಾಂಡ್ ಆಸ್ಪತ್ರೆ (ಕೋಲ್ಕತ್ತಾ) ದ ವೈದ್ಯಕೀಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಬ್ರಾಕಿಥೆರಪಿ ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಜರ್ಮನಿಯ ಬಿಇಬಿಐಜಿ ಮೆಡಿಕಲ್ ಸೊಲ್ಯೂಷನ್ಸ್ ಸಂಸ್ಥೆಯ ನಡುವಿನ ತಿಳುವಳಿಕೆ ಒಪ್ಪಂದ (ಎಂಒಯು) ಅನ್ವಯ ಶೈಕ್ಷಣಿಕ ಸಹಯೋಗದಡಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಅಂಕೋಲಜಿ ಸೆಂಟರ್ ಸಂಕೀರ್ಣ ಬ್ರಾಕಿಥೆರಪಿ ಕಾರ್ಯ ವಿಧಾನಗಳನ್ನು ನಿಯಮಿತವಾಗಿ ನಿರ್ವಹಿಸುವುದರಲ್ಲಿ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕೌಶಲ್ಯಪೂರ್ಣ ತಂಡದೊಂದಿಗೆ, ಕರಾವಳಿ ಕರ್ನಾಟಕದಲ್ಲಿ ನಿಖರ ರೇಡಿಯೊಥೆರಪಿಗೆ ಪ್ರಮುಖ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ತರಬೇತಿಯಲ್ಲಿ ಪ್ರಾಯೋಗಿಕ ಅವಧಿಗಳು, ಚಿಕಿತ್ಸಾ ಕಾರ್ಯಾಗಾರಗಳು, ಗುಣಮಟ್ಟದ ಭರವಸೆ ಮತ್ತು ಅಂತರಾಷ್ಟ್ರೀಯ ಅತ್ಯುತ್ತಮ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದು ಒಳಗೊಂಡಿದೆ. ವಿಕಿರಣ ಆಂಕೋಲಾಜಿ ವಿಭಾಗದ ತಜ್ಞರು ತಾಂತ್ರಿಕ ಸಿಬಂದಿ ಬಳಸಿಕೊಂಡು ಸೆಷನ್ ಗಳನ್ನು ನಡೆಸುತ್ತಿದ್ದಾರೆ.
ಕೆಎಂಸಿ ಮಂಗಳೂರು ಮತ್ತು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಜಂಟಿ ಉಪಕ್ರಮದಿಂದ ಕಾರ್ಯಕ್ರಮ ನಡೆಸಲಾಗಿದ್ದು ಆಧುನಿಕ ಮಾದರಿಯ ಕ್ಯಾನ್ಸರ್ ಚಿಕಿತ್ಸೆ ಮತ್ತು ಮಾಹಿತಿ ಹಂಚಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
A comprehensive HDR (High Dose Rate) Brachytherapy training program is currently underway at KMC Hospital, Attavar, Mangaluru, from July 28 to August 1. The workshop is specifically designed for representatives of the Armed Forces Medical Services and includes participation from Command Hospital (Bengaluru), INHS Asvini (Mumbai), Command Hospital (Lucknow), and Command Hospital (Kolkata).
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm