ಬ್ರೇಕಿಂಗ್ ನ್ಯೂಸ್
02-08-25 02:31 pm Mangaluru Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ತೀವ್ರ ಸಂಚಲನ ಎಬ್ಬಿಸಿರುವಾಗಲೇ ದೂರುದಾರ ವ್ಯಕ್ತಿಯನ್ನು ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ದೂರು ಹಿಂಪಡೆಯುವಂತೆ ಬೆದರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಮಾಧ್ಯಮಕ್ಕೆ ಹಂಚಿಕೊಂಡಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಆಗಸ್ಟ್ 1ರಂದು ರಾತ್ರಿ ದೂರುದಾರ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯಿಂದ ಹೇಳಿಕೆ ಪಡೆಯುವಾಗ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದು, ಈ ವೇಳೆ ಇಷ್ಟೆಲ್ಲ ಕರಾಮತ್ತು ಮಾಡೋ ಬದಲು ದೂರು ಹಿಂಪಡೆಯಬಹುದಲ್ವಾ.. ಏನೂ ಸಿಗದಿದ್ದರೆ ನೋಡೋಣ. ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಬೆದರಿಸಿದ್ದಾರೆ ಎಂಬುದಾಗಿ ದೂರುದಾರ ವ್ಯಕ್ತಿಯ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಎಸ್ಐಟಿ ತಂಡದಿಂದ ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿರುವಾಗ ಈ ರೀತಿಯ ಬೆಳವಣಿಗೆ ಸಾರ್ವಜನಿಕರಿಗೆ ತಂಡದ ಅಧಿಕಾರಿಗಳ ಬಗ್ಗೆ ಅಪನಂಬಿಕೆ ಮೂಡಿಸುತ್ತದೆ. ತಂಡದಲ್ಲಿ ಇಂತಹ ವ್ಯಕ್ತಿಗಳಿದ್ದಲ್ಲಿ ತನಿಖೆಗೆ ಅಡ್ಡಿಯಾಗಬಹುದು. ಹಾಗಾಗಿ ಅವರನ್ನು ಕೂಡಲೇ ಬದಲಿಸುವಂತೆ ಒತ್ತಾಯಿಸಿ ಎಸ್ಐಟಿ ಮುಖ್ಯಸ್ಥರಿಗೆ ಪತ್ರದಲ್ಲಿ ವಕೀಲರು ಆಗ್ರಹ ಮಾಡಿದ್ದಾರೆ. ವಕೀಲೆ ಅನನ್ಯಾ ಗೌಡ ಹೆಸರಿನಲ್ಲಿ ಎಸ್ಐಟಿ ಮುಖ್ಯಸ್ಥರಿಗೆ ಇಮೇಲ್ ದೂರು ನೀಡಲಾಗಿದೆ. ಮಂಜುನಾಥ ಗೌಡ ಶಿರಸಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದು, ಎಸ್ಐಟಿ ತಂಡಕ್ಕೆ ನಿಯೋಜನೆಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
In a fresh twist to the sensational Dharmasthala human remains case, allegations have surfaced against SIT Inspector Manjunath Gowda for allegedly threatening the complainant to withdraw the case. A formal complaint in this regard has been submitted by the complainant’s legal team to SIT Chief Pranav Mohanty via email, with copies also shared with the media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am