ಬ್ರೇಕಿಂಗ್ ನ್ಯೂಸ್
02-08-25 02:31 pm Mangaluru Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ತೀವ್ರ ಸಂಚಲನ ಎಬ್ಬಿಸಿರುವಾಗಲೇ ದೂರುದಾರ ವ್ಯಕ್ತಿಯನ್ನು ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ದೂರು ಹಿಂಪಡೆಯುವಂತೆ ಬೆದರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಮಾಧ್ಯಮಕ್ಕೆ ಹಂಚಿಕೊಂಡಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಆಗಸ್ಟ್ 1ರಂದು ರಾತ್ರಿ ದೂರುದಾರ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯಿಂದ ಹೇಳಿಕೆ ಪಡೆಯುವಾಗ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದು, ಈ ವೇಳೆ ಇಷ್ಟೆಲ್ಲ ಕರಾಮತ್ತು ಮಾಡೋ ಬದಲು ದೂರು ಹಿಂಪಡೆಯಬಹುದಲ್ವಾ.. ಏನೂ ಸಿಗದಿದ್ದರೆ ನೋಡೋಣ. ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಬೆದರಿಸಿದ್ದಾರೆ ಎಂಬುದಾಗಿ ದೂರುದಾರ ವ್ಯಕ್ತಿಯ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಎಸ್ಐಟಿ ತಂಡದಿಂದ ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿರುವಾಗ ಈ ರೀತಿಯ ಬೆಳವಣಿಗೆ ಸಾರ್ವಜನಿಕರಿಗೆ ತಂಡದ ಅಧಿಕಾರಿಗಳ ಬಗ್ಗೆ ಅಪನಂಬಿಕೆ ಮೂಡಿಸುತ್ತದೆ. ತಂಡದಲ್ಲಿ ಇಂತಹ ವ್ಯಕ್ತಿಗಳಿದ್ದಲ್ಲಿ ತನಿಖೆಗೆ ಅಡ್ಡಿಯಾಗಬಹುದು. ಹಾಗಾಗಿ ಅವರನ್ನು ಕೂಡಲೇ ಬದಲಿಸುವಂತೆ ಒತ್ತಾಯಿಸಿ ಎಸ್ಐಟಿ ಮುಖ್ಯಸ್ಥರಿಗೆ ಪತ್ರದಲ್ಲಿ ವಕೀಲರು ಆಗ್ರಹ ಮಾಡಿದ್ದಾರೆ. ವಕೀಲೆ ಅನನ್ಯಾ ಗೌಡ ಹೆಸರಿನಲ್ಲಿ ಎಸ್ಐಟಿ ಮುಖ್ಯಸ್ಥರಿಗೆ ಇಮೇಲ್ ದೂರು ನೀಡಲಾಗಿದೆ. ಮಂಜುನಾಥ ಗೌಡ ಶಿರಸಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದು, ಎಸ್ಐಟಿ ತಂಡಕ್ಕೆ ನಿಯೋಜನೆಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
In a fresh twist to the sensational Dharmasthala human remains case, allegations have surfaced against SIT Inspector Manjunath Gowda for allegedly threatening the complainant to withdraw the case. A formal complaint in this regard has been submitted by the complainant’s legal team to SIT Chief Pranav Mohanty via email, with copies also shared with the media.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm