ಬ್ರೇಕಿಂಗ್ ನ್ಯೂಸ್
04-08-25 06:05 pm Mangalore Correspondent ಕರಾವಳಿ
ಮಂಗಳೂರು, ಆ.4 : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು ಸರ್ಕಾರ ಗ್ರಾಹಕರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಸೋಮವಾರ ಬೆಳಗ್ಗೆ ಮರೋಳಿ-ಜೋಡುಕಟ್ಟೆ ಬಳಿಯ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ ಸರ್ಕಾರದ ಜವಾಬ್ದಾರಿ ಹೊರತು ಜನಸಾಮಾನ್ಯರದ್ದಲ್ಲ. ಸರ್ಕಾರ ತನ್ನ ಮೇಲಿನ ಹೊಣೆಯನ್ನು ಗ್ರಾಹಕರ ಮೇಲೆ ಹೊರಿಸಿದ್ದರಿಂದ ಸಹಜವಾಗಿ ಜನರು ಆಕ್ರೋಶಗೊಂಡಿದ್ದಾರೆ. ಯೂನಿಟಿಗೆ 36 ಪೈಸೆ ಹೆಚ್ಚಳದಂತೆ ಪ್ರತಿ ಮನೆಯಿಂದ ಕೋಟ್ಯಂತರ ರೂಪಾಯಿ ದೋಚುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.


ಈಗಾಗಲೇ ವಿದ್ಯುತ್ ದರ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಲಾಗಿದೆ. ಎರಡು ಸಾವಿರಕ್ಕೆ ಸಿಗುತ್ತಿದ್ದ ಸ್ಮಾರ್ಟ್ ಮೀಟರನ್ನು ಹತ್ತು ಸಾವಿರಕ್ಕೆ ಏರಿಕೆ ಮಾಡಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದೆ. ಆದರೂ ಈ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ. ಜನರು ತಿರುಗಿ ಬಿದ್ದರೆ ಮಾತ್ರ ಈ ದಪ್ಪ ಚರ್ಮದ ಸರ್ಕಾರಕ್ಕೆ ಬುದ್ಧಿ ಬರುವುದಾದರೆ ಜನತೆಯೇ ಪಾಠ ಕಲಿಸಲು ಸಿದ್ಧವಾಗಬೇಕು. ಜನಪರ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ ನೀಡುತ್ತದೆ ಎಂದು ಶಾಸಕ ಕಾಮತ್ ಹೇಳಿದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ, ವಸಂತ ಜೆ ಪೂಜಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ನಿಕಟಪೂರ್ವ ಮನಪಾ ಸದಸ್ಯರುಗಳು, ಮಂಡಲ ಹಾಗೂ ಜಿಲ್ಲೆಯ ಬಿಜೆಪಿ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Alleging that the Karnataka Congress government is unjustly burdening the public by collecting funds for the pensions and gratuity of electricity board employees through consumer electricity bills, the BJP’s Mangaluru South Mandal staged a protest on Monday morning outside the MESCOM office at Kulasekhara (Maroli-Jodukatte area).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm