ಬ್ರೇಕಿಂಗ್ ನ್ಯೂಸ್
05-08-25 04:29 pm Mangalore Correspondent ಕರಾವಳಿ
ಮಂಗಳೂರು, ಆ.5 : ಪಾಕಿಸ್ಥಾನ ವಿರುದ್ಧ 1965 ಮತ್ತು 1971ರಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಬಳಕೆಯಾಗಿದ್ದ ಭಾರತೀಯ ಭೂಸೇನೆಯ ಯುದ್ಧ ಟ್ಯಾಂಕರ್ ಟಿ-55 ಸಂಸದ ಕ್ಯಾ.ಬ್ರಿಜೇಶ್ ಚೌಟರ ಕೋರಿಕೆ ಮೇರೆಗೆ ಮಂಗಳೂರಿಗೆ ಆಗಮಿಸಿದ್ದು, ಸದ್ಯಕ್ಕೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿಯಲ್ಲಿ ಇರಿಸಲಾಗಿದೆ.
ಭಾರತೀಯ ಸೇನೆಯಲ್ಲಿ 1961ರಿಂದ 2001ರ ವರೆಗೆ ಸೇವೆಯಲ್ಲಿದ್ದ ಈ ಯುದ್ಧ ಟ್ಯಾಂಕರನ್ನು ಪುಣೆಯ ಕಿರ್ಕಿಯಲ್ಲಿರುವ ಭಾರತೀಯ ಸೇನೆಯ ಡಿಪೋದಲ್ಲಿ ಇರಿಸಲಾಗಿತ್ತು. ಅದನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ವಿಶೇಷ ಟ್ರೈಲರ್ ನಲ್ಲಿ ಮಂಗಳೂರಿಗೆ ತರಿಸಲಾಗಿದೆ. ಇತ್ತೀಚೆಗೆ ಸಂಸದ ಬ್ರಿಜೇಶ್ ಚೌಟ, ಸೇನೆಯಲ್ಲಿ ಸೇವೆಗೈದ ಟ್ಯಾಂಕರ್ ಒಂದನ್ನು ಉಚಿತವಾಗಿ ಮಂಗಳೂರಿಗೆ ನೀಡಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಇದರಂತೆ, ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರಕ್ಕೆ ತರಿಸಲಾಗಿದೆ.


ಅಂದಹಾಗೆ, ಈ ಯುದ್ಧ ಟ್ಯಾಂಕ್ ಅನ್ನು ಕದ್ರಿಯಲ್ಲಿರುವ ವಾರ್ ಮೆಮೋರಿಯಲ್ ಬಳಿಯಲ್ಲೇ ಇರಿಸುವ ಯೋಜನೆ ಇದೆಯಂತೆ. ವೀರ ಯೋಧರನ್ನು ಸ್ಮರಿಸುವ ಮತ್ತು ಸೇನೆಗೆ ಸೇರುವ ಯುವಕರಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಯುದ್ಧ ಟ್ಯಾಂಕರನ್ನು ಮಂಗಳೂರು ನಗರ ಮಧ್ಯದಲ್ಲಿ ಇರಿಸಬೇಕೆಂದು ಸಂಸದ ಚೌಟರು ಯೋಚನೆ ಹೊಂದಿದ್ದಾರೆ. ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿಯಾಗಿರುವ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ಯುದ್ಧ ಸ್ಮರಣಿಕೆ ರೀತಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ. ಕದ್ರಿ ಯುದ್ಧ ಸ್ಮಾರಕದ ಬಳಿಯಲ್ಲಿ ಸೂಕ್ತ ವೇದಿಕೆಯನ್ನು ನಿರ್ಮಿಸಿ ಯುದ್ಧ ಟ್ಯಾಂಕರ್ ಇರಿಸಬೇಕೆಂಬ ಯೋಜನೆ ಇದೆಯೆಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬರೋಬ್ಬರಿ 40 ಟನ್ ತೂಕವಿರುವ ಟಿ-55 ಯುದ್ಧ ಟ್ಯಾಂಕರ್ ಶುಕ್ರವಾರ ಪುಣೆಯಿಂದ ಹೊರಟಿದ್ದು ಮೂರು ದಿನದ ಪ್ರಯಾಣದ ಬಳಿಕ ಸೋಮವಾರ ರಾತ್ರಿ ಮಂಗಳೂರು ತಲುಪಿದೆ.
A historic T-55 battle tank, which was part of India’s military operations during the 1965 and 1971 wars against Pakistan, has arrived in Mangaluru and is currently stationed near the Kadri Circuit House. The tank has been brought to the city following a request by MP Capt. Brijesh Chowta.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am