ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am