ಬ್ರೇಕಿಂಗ್ ನ್ಯೂಸ್
06-08-25 07:37 pm Mangalore Correspondent ಕರಾವಳಿ
ಮಂಗಳೂರು, ಆ.6 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಇಂದು ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನ ಮಧ್ಯೆ ಶೋಧ ಕಾರ್ಯ ನಡೆಸಿದ್ದಾರೆ. ಇದಲ್ಲದೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಗೂ ತೆರಳಿ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇದೇ ವೇಳೆ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಲ್ಲ ಆಯಾಮಗಳಿಂದಲೂ ಎಸ್ಐಟಿ ತನಿಖೆಗೆ ಇಳಿದಿದ್ದು, ಯಾವುದೇ ರೀತಿಯ ಗೊಂದಲ, ಸಂಶಯ ಉಳಿಯಬಾರದು ಎನ್ನುವ ನಿಟ್ಟಿಲ್ಲಿ ಶೋಧಕ್ಕೆ ಮುಂದಾಗಿದೆ. ದೂರುದಾರ ವ್ಯಕ್ತಿ ತೋರಿಸಿದ್ದ 13 ಪಾಯಿಂಟ್ ಪೈಕಿ 12 ಕಡೆ ಈಗಾಗಲೇ ಅಗೆಯಲಾಗಿದ್ದು, ಒಂದು ಕಡೆ ಮಾತ್ರ ಅಸ್ಥಿಪಂಜರ ಸಾಕ್ಷ್ಯ ಸಿಕ್ಕಿತ್ತು. ಇದರ ನಡುವೆ ಬಂಗ್ಲೆಗುಡ್ಡೆ ಕಾಡಿನ ಮಧ್ಯೆ ಮತ್ತೊಂದು ಕಡೆ ಶವದ ಅಸ್ಥಿಪಂಜರ ಸಿಕ್ಕಿದ್ದು ಬಿಟ್ಟರೆ, ಗುರುತಿಸಲಾದ ಪಾಯಿಂಟ್ ಗಳಲ್ಲಿ ಹೆಚ್ಚು ಸಾಕ್ಷ್ಯ ಸಿಕ್ಕಿರಲಿಲ್ಲ. ಹೀಗಾಗಿ ಹಲವು ರೀತಿಯ ಗೋಜಲು, ಗೊಂದಲ ಎದುರಾಗಿರುವಾಗಲೇ ದೂರುದಾರ ವ್ಯಕ್ತಿ ಬೇರೆಯದ್ದೇ ಪಾಯಿಂಟ್ ಗಳನ್ನು ಹೇಳತೊಡಗಿದ್ದಾನೆ.





ದೂರುದಾರ ವ್ಯಕ್ತಿಯ ಕೋರಿಕೆಯಂತೆ, ಬುಧವಾರ ಬಂಗ್ಲೆಗುಡ್ಡೆ ಕಾಡಿನಲ್ಲಿ ಮೊನ್ನೆ ಅಸ್ಥಿಪಂಜರ ಸಿಕ್ಕಿರುವ ಜಾಗದಲ್ಲೇ ಇಂದು ಕಾರ್ಮಿಕರನ್ನು ಬಳಸಿ ಅಗೆಯಲಾಗಿದೆ. ಆದರೆ, ಯಾವುದೇ ಸಾಕ್ಷ್ಯ ಲಭಿಸಿಲ್ಲ ಎಂದು ಹೇಳಲಾಗುತ್ತಿದ್ದು, ಸಂಜೆಯ ವೇಳೆಗೆ ಗುಡ್ಡದಿಂದ ಇಳಿದು ಬಂದ ಅಧಿಕಾರಿಗಳು ನೇರವಾಗಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಇದೇ ವೇಳೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಬಂದಿದ್ದು, ಡಿಐಜಿ, ಎಸ್ಪಿ ಮತ್ತು ತಂಡದ ಇತರ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಇದೇ ವೇಳೆ, ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ 1995ರಿಂದ 2014ರ ವರೆಗೆ ಆಡಳಿತ ನಡೆಸಿರುವ ಅಧ್ಯಕ್ಷರು, ಅಧಿಕಾರಿಗಳು ಮತ್ತು ಅಸಹಜ ಸಾವುಗಳ ಕುರಿತ ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳು ಪಡೆದಿದ್ದಾರೆ. ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಒಬ್ಬರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಲ್ಲಿರುವ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಇದೇ ವೇಳೆ, ಯೂಟ್ಯೂಬ್ ಚಾನೆಲ್ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ಧರ್ಮಸ್ಥಳ ದೇವಸ್ಥಾನವನ್ನು ಟಾರ್ಗೆಟ್ ಮಾಡಲಾಗಿದೆ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಎಸ್ಐಟಿ ತಂಡದ ಮಾಹಿತಿಯೆಂದು ಸುಳ್ಳು ವಿಚಾರಗಳನ್ನು ಹರಿಯಬಿಟ್ಟು ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಕಿರುತೆರೆ ನಟ ಕಿರಿಕ್ ಕೀರ್ತಿ ಬೆಳ್ತಂಗಡಿಗೆ ಬಂದು ಎಸ್ಐಟಿ ಕಚೇರಿಗೆ ದೂರು ನೀಡಿದ್ದಾರೆ. ಇದೇ ವೇಳೆ, ಹೋರಾಟಗಾರರ ಪರ ಇರುವ ಸೋಶಿಯಲ್ ಮೀಡಿಯಾಗಳ ವಿರುದ್ಧ ಕಿರಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
The Special Investigation Team (SIT), probing the alleged burial of a body in Dharmasthala, resumed its search operations today in the Banglegudde forest near Snanaghatta. The search was specifically conducted at the same location where skeletal remains were discovered earlier this week. Labourers were deployed to assist in digging, but no new evidence was found during today’s search.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm