ಬ್ರೇಕಿಂಗ್ ನ್ಯೂಸ್
24-12-20 05:10 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಗರದ ಎಲ್ಲೆಂದರಲ್ಲಿ ಕಾಮಗಾರಿ ನಡೆಸುತ್ತಾ ನಿತ್ಯ ಸಂಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.
ಕಾಮಗಾರಿ ತಾತ್ಕಾಲಿಕ ನಿಲ್ಲಿಸುವ ಕುರಿತಾಗಿ ಪಾಲಿಕೆ ಆಯುಕ್ತ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಹೈಕೋರ್ಟ್ಗೆ ತಿಳಿಸಿದ್ದಾರೆ.

ನಿರ್ಮಾಣ ಹಾಗೂ ನೆಲಸಮ ತ್ಯಾಜ್ಯ ನಿರ್ವಹಣೆ- 2016ರ ನಿಯಮಗಳನ್ನು ಅನುಸರಿಸುವ ತನಕ ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿತ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಈ ಸಂಬಂಧ ಆಯಾ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಪಚ್ಚನಾಡಿ, ಮಂದಾರದಲ್ಲಿ ಘನತ್ಯಾಜ್ಯ ಘಟಕದಿಂದ ಉಂಟಾದ ಅನಾಹುತಗಳ ಬಗ್ಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ.ಎ.ಎಸ್.ಓಕಾ ಹಾಗೂ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ನ್ಯಾಯಪೀಠ, ಅಕ್ಷಯ್ ಶ್ರೀಧರ್ ಅವರನ್ನು ಪ್ರಶ್ನೋತ್ತರ ವಿಧಾನದಲ್ಲಿ ವಿಚಾರಣೆ ನಡೆಸಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ, ನಿಯಮ ಪಾಲಿಸುತ್ತಿಲ್ಲ ಎಂದಾದರೆ ನಿಯಮಗಳನ್ನು ಪಾಲಿಸುವ ತನಕ ಕಾಮಗಾರಿ ಸ್ಥಗಿತಗೊಳಿಸುತ್ತೀರಾ ಎಂದು ಪ್ರಶ್ನಿಸಿದೆ.
ಇದಕ್ಕೆ ಉತ್ತರಿಸಿದ ಆಯುಕ್ತರು, ಸದ್ರಿ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. 2016ರ ನಿಯಮಗಳನ್ನು ಅನುಸರಿಸುವ ತನಕ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am