ಬ್ರೇಕಿಂಗ್ ನ್ಯೂಸ್
08-08-25 04:42 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.8 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು:ದೂರುದಾರನ ಹೇಳಿಕೆಯಂತೆ ಧರ್ಮಸ್ಥಳ - ಸುಬ್ರಹ್ಮಣ್ಯ ಹೆದ್ದಾರಿಯ ಬೋಳಿಯಾರ್ ಎಂಬ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರುದಾರ ತೋರಿಸಿದ ಜಾಗದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಅಲ್ಲಿ ಎರಡು ಕಡೆ ಅಸ್ಥಿಪಂಜರದ ಸಾಕ್ಷ್ಯ ಲಭಿಸಿತ್ತು. ಆನಂತರ, ಅಲ್ಲಿ ಗುರುತಿಸಿರುವ 13ನೇ ಪಾಯಿಂಟ್ ನಲ್ಲಿ ಇನ್ನೂ ಶೋಧ ಕಾರ್ಯ ನಡೆದಿಲ್ಲ.




ಈ ನಡುವೆ, ಎಸ್.ಐ.ಟಿ ತಂಡವನ್ನು ದೂರುದಾರ ಹೊಸ ಜಾಗಕ್ಕೆ ಕರೆದೊಯ್ದಿದ್ದಾನೆ. ಧರ್ಮಸ್ಥಳದಿಂದ ಎರಡು ಕಿಮೀ ದೂರದ ಬೊಳಿಯಾರ್ ಗೋಂಕ್ರತಾರ್ ಎಂಬಲ್ಲಿನ ದಟ್ಟ ಅರಣ್ಯಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. ಹೊಸ ಜಾಗದಲ್ಲಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬ ಕುತೂಹಲ ಇದೆ. ಹೊಸ ಜಾಗದಲ್ಲಿ ಸ್ಥಳ ಗುರುತು ಹಾಕಲು ಎಸ್ಐಟಿ ಮುಂದಾಗಿದ್ದು ಪಾಯಿಂಟ್ ನಂ 15 ರ ಸೈನ್ ಬೋರ್ಡ್ ತೆಗೆದುಕೊಂಡು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಕಲ್ಲೇರಿಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಹೊಸ ಜಾಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಎಸ್ಐಟಿ ತಂಡ ಮತ್ತು ಶವ ಹೂತಿದ್ದಾನೆ ಎನ್ನಲಾದ ಅರಣ್ಯದೊಳಕ್ಕೆ ದೂರುದಾರ ಕರೆದೊಯ್ದಿದ್ದಾನೆ. ಜುಲೈ 3ರಂದು ನೀಡಿದ್ದ ದೂರಿನಲ್ಲಿ ಕಲ್ಲೇರಿ ಎಂಬಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ಬಾಲಕಿಯನ್ನು ಹೂತು ಹಾಕಿದ್ದಾಗಿ ಹೇಳಿದ್ದ. ಅಲ್ಲಿಂದ ಒಂದು ಕಿಮೀ ಮುಂದೆ ಬೊಳಿಯಾರ್ ಎಂಬಲ್ಲಿಗೆ ತಂಡ ತಲುಪಿದ್ದು ಕಾಡಿನಲ್ಲಿ ಸ್ಥಳ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕೆ ಹಾರೆ ಪಿಕ್ಕಾಸಿನ ಜೊತೆಗೆ ಕಾರ್ಮಿಕರು ಮತ್ತು ಸಣ್ಣ ಹಿಟಾಚಿಯೂ ತೆರಳಿದೆ.
The Special Investigation Team (SIT) probing the Dharmasthala burial case has launched a fresh search operation in a newly identified location near Boliyar along the Dharmasthala-Subrahmanya highway. This move follows a tip-off by the complainant, who recently guided the team to the dense forest area.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm