ಬ್ರೇಕಿಂಗ್ ನ್ಯೂಸ್
11-08-25 11:38 am Mangalore Correspondent ಕರಾವಳಿ
ಮಂಗಳೂರು, ಆ.11 : ವ್ಯಕ್ತಿಯೊಬ್ಬರು ಬೈಕಿನಲ್ಲಿ ಸಾಗುತ್ತಿದ್ದಾಗ ತಡೆದು ನಿಲ್ಲಿಸಿ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ವಿಚಾರದಲ್ಲಿ ಪ್ರಶ್ನೆ ಮಾಡಿ ತಮ್ಮನ್ನು ಕುಡ್ಲ ರಾಂಪೇಜ್ ಯೂಟ್ಯೂಬ್ ತಂಡದವರೆಂದು ಹೇಳಿಕೊಂಡಿದ್ದು ಆನಂತರ ಹಲ್ಲೆಗೈದಿದ್ದಾರೆಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ನಿವಾಸಿ ಹರೀಶ್ ನಾಯ್ಕ (46) ಎಂಬವರು ಆ.6ರಂದು ಮಧ್ಯಾಹ್ನ ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದಾಗ, ಅಲ್ಲಿ ವಿಡಿಯೋ ಕ್ಯಾಮರಾ ಹಿಡಿದು ನಿಂತಿದ್ದ ಮೂವರು ವ್ಯಕ್ತಿಗಳು ನಿಲ್ಲಿಸುವಂತೆ ಸೂಚಿಸಿದ್ದರು. ಮೋಟಾರ್ ಸೈಕಲ್ ನಿಲ್ಲಿಸಿ ವಿಚಾರಿಸಿದಾಗ, ತನ್ನನ್ನು ಕುಡ್ಲ ರಾಂ ಪೇಜ್ ಯೂಟ್ಯೂಬರ್ ಎಂದು ಪರಿಚಯಿಸಿಕೊಂಡಿದ್ದು ಧರ್ಮಸ್ಥಳ ಪರಿಸರದಲ್ಲಿ ಹೆಣಗಳನ್ನು ಹೂತಿರುವ ಬಗ್ಗೆ ವಿಚಾರಿಸಿ, ಬಳಿಕ ತಕರಾರು ತೆಗೆದಿದ್ದಾರೆ. ಕುಡ್ಲ ರಾಂಪೇಜ್ ಎಂಬ ಯೂಟ್ಯೂಬರ್ ಹಾಗು ಆತನೊಂದಿಗೆ ಇದ್ದ ಇನ್ನಿಬ್ಬರು ಏಕಾಏಕಿ ತನಗೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:50/2025 ಕಲಂ: 126(2),115(2), 352 ಜೊತೆಗೆ 3(5) ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಕೊಲೆ ; ಮತ್ತೊಬ್ಬ ಆರೋಪಿ ಬಂಧನ
ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧಿಸಿ ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದು ಆ.10ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ರಂಜಿತ್ @ ರಂಜು (35) ಎಂಬಾತ ಬಂಧಿತ. ಕೊಲೆ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಹಕರಿಸಿದವರು, ಕೊಲೆಗೆ ಸಂಚು ನಡೆಸಿದವರು ಸೇರಿ ಎಲ್ಲರನ್ನೂ ಬಂಧಿಸುತ್ತಿದ್ದಾರೆ.
ಭಾರತೀಯ ಸೇನೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಕೋಮು ದ್ವೇಷದ ಪೋಸ್ಟ್
ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ "ಭಾರತೀಯ ಸೇನೆ" ಎಂಬ ಹೆಸರಿನಲ್ಲಿ ಪೇಜನ್ನು ಹೊಂದಿರುವ ವ್ಯಕ್ತಿಯೊಬ್ಬ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗುವಂತೆ ಮತ್ತು ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 70/2025 ಕಲಂ: 196(1)(a) 353(2) BNS 2023 ರಂತೆ ಸುಮೋಟೋ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
A case has been registered at Dharmasthala Police Station after a man alleged that members of the ‘Kudla Rampage’ YouTube team stopped his bike and assaulted him over questions regarding the alleged burial of bodies in Dharmasthala.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
24-10-25 10:07 am
Mangalore Correspondent
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm