ಬ್ರೇಕಿಂಗ್ ನ್ಯೂಸ್
11-08-25 11:49 am Mangalore Correspondent ಕರಾವಳಿ
ಮಂಗಳೂರು, ಆ.11 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಶವಗಳ ಶೋಧ ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಉಪಕರಣ ಬಳಸುವಂತೆ 2003ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ತಾಯಿ ಸುಜಾತ ಭಟ್ ಪರ ವಕೀಲ ಮಂಜುನಾಥ್ ಎನ್ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಮಂಜುನಾಥ್ ಎನ್, ಎಸ್ಐಟಿ ತಂಡದ ಶೋಧ ಕಾರ್ಯಾಚರಣೆಯಲ್ಲಿ ದೂರುದಾರ ಸೂಚಿಸಿದ ಸ್ಥಳಗಳಲ್ಲಿ ಉತ್ಪನನ ನಡೆಸಿದರೂ, ಸರಿಯಾದ ಸಾಕ್ಷ್ಯ ಪತ್ತೆಯಾಗಿಲ್ಲ. ಹಾಗೆಂದು ಅಗೆತ ನಡೆದಿರುವ ಸ್ಥಳದಿಂದ ಆಚೀಚೆ ಅಥವಾ ಅದಕ್ಕಿಂತ ಆಳದಲ್ಲಿ ಶವದ ಕುರುಹು ಸಿಗಲಿಕ್ಕಿಲ್ಲವೆಂದು ಖಚಿತಪಡಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣವೇ ಗೌಂಡ್ ಪೆನೆಟ್ರೇಟಿಂಗ್ ರಾಡಾರ್ ಉಪಕರಣದ ಬಳಸಿ, ನೆಲದಡಿಯಲ್ಲಿ ಎಲ್ಲಿ ಹೆಣ ಹೂಳಲಾಗಿದೆ ಎಂಬುದನ್ನು ಪತ್ತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಭೀಮ ನೀಡಿರುವ ಮಾಹಿತಿಯ ವಿಶ್ವಾಸಾರ್ಹತೆಯ ಪ್ರಶ್ನೆ ಎತ್ತುವವರು, ದಿನದಿಂದ ದಿನಕ್ಕೆ SIT ತನಿಖೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ರೀತಿಯ ವರ್ತನೆ ದೂರುದಾರನ ಹೇಳಿಕೆಗಳ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತದೆ ಎಂದವರು ಹೇಳಿದ್ದು ಎಸ್ಐಟಿ ಈಗಾಗಲೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಇನ್ನಷ್ಟು ನುರಿತ ತಂತ್ರಜ್ಞಾನ ಬಳಸಿ ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳು ಹಾಗೂ ಅವುಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಬಹಿರಂಗಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.
ದೂರುದಾರ ಭೀಮನ ಹೇಳಿಕೆ ಮುಂದೆ ತೋರಿಸುವ ಎಲ್ಲ ಸ್ಥಳಗಳಲ್ಲೂ ವಿಫಲನಾಗುತ್ತಾನೆಂಬ ವಿಶ್ವಾಸವಿರುವವರು ಎಸ್ಐಟಿ ತನಿಖೆಯನ್ನು ವಿರೋಧಿಸುತ್ತಿರಲಿಲ್ಲ. ಆದರೆ, ದಿನದಿಂದ ದಿನಕ್ಕೆ ಕಾರ್ಯಾಚರಣೆಗೆ ಕೆಲವರು ವಿರೋಧಿಸುತ್ತಿರುವುದನ್ನು ನೋಡಿದಾಗ, ದೂರುದಾರ ಸತ್ಯವನ್ನೇ ಹೇಳುತ್ತಿದ್ದಾನೆಂಬ ನಂಬಿಕೆ ಗಟ್ಟಿಗೊಳ್ಳುತ್ತಿದೆ. ಇದಲ್ಲದೆ, ಧರ್ಮಸ್ಥಳದ ವಿವಿಧೆಡೆ ಶವಗಳನ್ನು ಹೂತು ಹಾಕಿರುವುದನ್ನು ಕಂಡಿದ್ದಾಗಿ ಹಲವು ಗ್ರಾಮಸ್ಥರು ಈಗಾಗಲೇ SIT ಮುಂದೆ ಬಂದಿದ್ದಾರೆ. ಅವರನ್ನು ಕೂಡ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಬೇಕು ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.
In the ongoing Dharmasthala human remains investigation, advocate Manjunath N., representing Sujatha Bhatt — mother of medical student Ananya Bhatt who went missing in Dharmasthala in 2003 — has urged the Special Investigation Team (SIT) to use advanced Ground Penetrating Radar (GPR) technology to locate buried bodies.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm