ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm