ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm