ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am