ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am