ಬ್ರೇಕಿಂಗ್ ನ್ಯೂಸ್
13-08-25 10:22 pm Mangalore Correspondent ಕರಾವಳಿ
ಬಂಟ್ವಾಳ, ಆ.13 : ಲಂಚದ ಹಣಕ್ಕೆ ಕೈಯೊಡ್ಡಿದ ಬಂಟ್ವಾಳ ಉಪ ತಹಶೀಲ್ದಾರ್ ಹಾಗೂ ಇತರ ಇಬ್ಬರು ಸಿಬಂದಿಯನ್ನು ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದೆ.
ಸಜಿಪ ಮುನ್ನೂರು ಗ್ರಾಮದ ಸರ್ವೇ ನಂಬರ್ 102/1ರಲ್ಲಿ ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು
ಬಂಟ್ವಾಳ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದರ ದಾಖಲಾತಿ ಫೈಲನ್ನು ಕಳೆದ ಏಪ್ರಿಲ್ ತಿಂಗಳಿನಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲೇ ಬಾಕಿ ಇಟ್ಟುಕೊಂಡಿದ್ದು ಈ ಬಗ್ಗೆ ದೂರುದಾರರು ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಎಂಬವರಲ್ಲಿ ವಿಚಾರಿಸಿದ್ದರು. ಪೌತಿ ಖಾತೆ ಮಾಡಿಕೊಡಲು 1,500 ರೂ. ನೀಡುವಂತೆ ಕೇಸ್ ವರ್ಕರ್ ಸಂತೋಷ್ ಹಾಗೂ ಪೌತಿ ಖಾತೆ ಮಾಡಿಕೊಡಲು ತಹಶೀಲ್ದಾರ್ ಅವರಿಗೆ 20,000 ರೂ. ನೀಡಬೇಕು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಕೇಳಿದ್ದರು ಎಂದು ದೂರುದಾರರು ಸಾಕ್ಷಿಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬುಧವಾರ ಮಧ್ಯಾಹ್ನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಬ್ರೋಕರ್ ಗಣೇಶ್ ವಾಮದಪದವು ಅವರ ಮೂಲಕ 20,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಬ್ರೋಕರ್ ಗಣೇಶ್ ವಾಮದಪದವು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್, ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
In a major anti-corruption operation, Lokayukta officials caught Bantwal Deputy Tahsildar Rajesh Naik red-handed while allegedly accepting a bribe of ₹20,000. Along with him, a case worker and a broker have also been arrested.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am