ಬ್ರೇಕಿಂಗ್ ನ್ಯೂಸ್
16-08-25 04:45 pm Mangalore Correspondent ಕರಾವಳಿ
ಮಂಗಳೂರು, ಆ.16 : ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ ಮಾಹಿತಿ ಹಕ್ಕಿನಡಿ ತಿಳಿಸಿದೆ. ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ನಡುವೆಯೇ ಗ್ರಾಪಂ ನೀಡಿರುವ ಈ ಮಾಹಿತಿ ವಿವಾದಕ್ಕೆ ಕಾರಣವಾಗಿದೆ.
ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1987 ರಿಂದ 2025ರ ವರೆಗೆ ಅಂದರೆ 38 ವರ್ಷಗಳಲ್ಲಿ 279 ಅನಾಥ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಲಾಗಿದೆ. ಇದರಲ್ಲಿ ಒಂದು ನವಜಾತ ಶಿಶು, 219 ಪುರುಷರು ಹಾಗೂ 46 ಮಹಿಳೆಯರ ಶವಗಳನ್ನು ಹೂಳಲಾಗಿದೆ ಎಂದು ಹೇಳಿದೆ. ಈ ಪೈಕಿ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಆರ್ಟಿಐ ಪ್ರಶ್ನೆಗೆ ಈ ಮಾಹಿತಿ ನೀಡಿದೆ. 2003 - 2004, 2006 - 2007 ಮತ್ತು 2014 - 2015 ರಲ್ಲಿ 17 ಅನಾಥ ಶವಗಳನ್ನು ಹೂಳಲಾಗಿತ್ತು. ಕಳೆದ 10 ವರ್ಷಗಳಲ್ಲಿ 101 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಆರ್ಟಿಐನಡಿ ಮಾಹಿತಿ ಕೇಳಿ ವರದಿ ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ಮಾಡಿಸುತ್ತಿದೆ. ಆದರೆ ತನಿಖೆ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ಇದರ ಹಿಂದೆ ಷಡ್ಯಂತ್ರ ಇದೆಯೆಂದು ಹೇಳುವ ಮೂಲಕ ಒಟ್ಟು ತನಿಖಾ ಪ್ರಕ್ರಿಯೆಗೆ ಎಳ್ಳುನೀರು ಬಿಡುವ ಯತ್ನ ಮಾಡಿದ್ದಾರೆ. ಇದಲ್ಲದೆ, ಶವಗಳನ್ನು ಹೂತಿದ್ದೇನೆಂದು ಹೇಳಿರುವ ವ್ಯಕ್ತಿ ತೋರಿಸಿದ ಜಾಗದಲ್ಲಿ ಅಗೆದರೂ ಸಾಕ್ಷ್ಯ ಸಿಗದಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ.
ಸದ್ಯಕ್ಕೆ, ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮ ನೀಡಲಾಗಿತ್ತು. ಶನಿವಾರ, ಭಾನುವಾರವೂ ಶೋಧ ಕಾರ್ಯ ನಡೆಯುವ ಸಾಧ್ಯತೆ ಇಲ್ಲ. ಎಸ್ಐಟಿ ತನಿಖಾ ತಂಡದಿಂದ ಜು.28ರಂದು ಶೋಧ ಕಾರ್ಯ ಆರಂಭಿಸಿದ್ದು ರಜಾ ದಿನಗಳನ್ನು ಹೊರತುಪಡಿಸಿ 15 ದಿನಗಳಲ್ಲಿ 17 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಪಕ್ಷಗಳ ಆಗ್ರಹ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಸದನದಲ್ಲಿ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.
Amid ongoing controversy surrounding the alleged burial of hundreds of bodies in Dharmasthala, a Right to Information (RTI) reply from the Dharmasthala Gram Panchayat has confirmed that 279 unclaimed bodies were buried in the area over the past 38 years, from 1987 to 2025.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am