ಬ್ರೇಕಿಂಗ್ ನ್ಯೂಸ್
16-08-25 04:45 pm Mangalore Correspondent ಕರಾವಳಿ
ಮಂಗಳೂರು, ಆ.16 : ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ ಮಾಹಿತಿ ಹಕ್ಕಿನಡಿ ತಿಳಿಸಿದೆ. ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ನಡುವೆಯೇ ಗ್ರಾಪಂ ನೀಡಿರುವ ಈ ಮಾಹಿತಿ ವಿವಾದಕ್ಕೆ ಕಾರಣವಾಗಿದೆ.
ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1987 ರಿಂದ 2025ರ ವರೆಗೆ ಅಂದರೆ 38 ವರ್ಷಗಳಲ್ಲಿ 279 ಅನಾಥ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಲಾಗಿದೆ. ಇದರಲ್ಲಿ ಒಂದು ನವಜಾತ ಶಿಶು, 219 ಪುರುಷರು ಹಾಗೂ 46 ಮಹಿಳೆಯರ ಶವಗಳನ್ನು ಹೂಳಲಾಗಿದೆ ಎಂದು ಹೇಳಿದೆ. ಈ ಪೈಕಿ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಆರ್ಟಿಐ ಪ್ರಶ್ನೆಗೆ ಈ ಮಾಹಿತಿ ನೀಡಿದೆ. 2003 - 2004, 2006 - 2007 ಮತ್ತು 2014 - 2015 ರಲ್ಲಿ 17 ಅನಾಥ ಶವಗಳನ್ನು ಹೂಳಲಾಗಿತ್ತು. ಕಳೆದ 10 ವರ್ಷಗಳಲ್ಲಿ 101 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಆರ್ಟಿಐನಡಿ ಮಾಹಿತಿ ಕೇಳಿ ವರದಿ ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ಮಾಡಿಸುತ್ತಿದೆ. ಆದರೆ ತನಿಖೆ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ಇದರ ಹಿಂದೆ ಷಡ್ಯಂತ್ರ ಇದೆಯೆಂದು ಹೇಳುವ ಮೂಲಕ ಒಟ್ಟು ತನಿಖಾ ಪ್ರಕ್ರಿಯೆಗೆ ಎಳ್ಳುನೀರು ಬಿಡುವ ಯತ್ನ ಮಾಡಿದ್ದಾರೆ. ಇದಲ್ಲದೆ, ಶವಗಳನ್ನು ಹೂತಿದ್ದೇನೆಂದು ಹೇಳಿರುವ ವ್ಯಕ್ತಿ ತೋರಿಸಿದ ಜಾಗದಲ್ಲಿ ಅಗೆದರೂ ಸಾಕ್ಷ್ಯ ಸಿಗದಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ.
ಸದ್ಯಕ್ಕೆ, ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮ ನೀಡಲಾಗಿತ್ತು. ಶನಿವಾರ, ಭಾನುವಾರವೂ ಶೋಧ ಕಾರ್ಯ ನಡೆಯುವ ಸಾಧ್ಯತೆ ಇಲ್ಲ. ಎಸ್ಐಟಿ ತನಿಖಾ ತಂಡದಿಂದ ಜು.28ರಂದು ಶೋಧ ಕಾರ್ಯ ಆರಂಭಿಸಿದ್ದು ರಜಾ ದಿನಗಳನ್ನು ಹೊರತುಪಡಿಸಿ 15 ದಿನಗಳಲ್ಲಿ 17 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಪಕ್ಷಗಳ ಆಗ್ರಹ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಸದನದಲ್ಲಿ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.
Amid ongoing controversy surrounding the alleged burial of hundreds of bodies in Dharmasthala, a Right to Information (RTI) reply from the Dharmasthala Gram Panchayat has confirmed that 279 unclaimed bodies were buried in the area over the past 38 years, from 1987 to 2025.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm