ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm