ಬ್ರೇಕಿಂಗ್ ನ್ಯೂಸ್
16-08-25 11:11 pm Mangalore Correspondent ಕರಾವಳಿ
ಮಂಗಳೂರು, ಆ.16 : ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡರೆ, ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿಯಿಂದ ಹಲವೆಡೆ ಗುಡ್ಡ ಕುಸಿದಿದ್ದು ಮರ, ಗಿಡಗಳ ಸಮೇತ ರಸ್ತೆಗೆ ಗುಡ್ಡ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಘಾಟ್ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಸಂಜೆಯಿಂದಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಶಿರಾಡಿ ಘಾಟ್ ಭಾಗದ ಹಲವೆಡೆ ಕುಸಿತ ಆಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಿಲುಕಿದ್ದು ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರಗಳು ರಸ್ತೆಗೆ ಬಿದ್ದಿದ್ದು ಮರಗಳನ್ನು ತೆರವುಗೊಳಿಸಲು ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ಇದೇ ವೇಳೆ, ಶಿರಾಡಿ ಘಾಟಿಯಲ್ಲಿ ರೈಲು ಹಳಿಯ ಮೇಲೂ ಮಣ್ಣು ಕುಸಿಯುತ್ತಿದ್ದು ರೈಲು ಸಂಚಾರದಲ್ಲು ವ್ಯತ್ಯಯವಾಗಿದೆ. ಬೆಂಗಳೂರು - ಕಾರವಾರ ರೈಲನ್ನು ಹಾಸನದ ಬಳಿಕ ಡೈವರ್ಟ್ ಮಾಡಿದ್ದು ಸುಬ್ರಹ್ಮಣ್ಯ ಹಳಿಯ ಬದಲು ಹುಬ್ಬಳ್ಳಿ ಮೂಲಕ ಕಾರವಾರ ತಲುಪುವಂತೆ ಮಾಡಲಾಗಿದೆ.
ಹಾಸನ ರೈಲಿನಲ್ಲಿ ಬೆಂಕಿ, ನಂದಿಸಿದ ಸಿಬಂದಿ
ಇದೇ ವೇಳೆ, ಚಲಿಸುತ್ತಿದ್ದ ರೈಲಿನ ಬೋಗಿಯ ಅಡಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತು ಹಾಸನ ರೈಲ್ವೇ ನಿಲ್ದಾಣದಲ್ಲಿ ಬೆಂಕಿ ನಂದಿಸಿ ಸಿಬಂದಿ ಅಪಾಯ ತಪ್ಪಿಸಿದ್ದಾರೆ. ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ತಕ್ಷಣವೇ ಇದನ್ನು ಗಮನಿಸಿದ ಸಿಬಂದಿ ಬೆಂಕಿ ನಂದಿಸಿದ್ದಾರೆ.
Heavy rainfall in the Malnad region has triggered a massive landslide at Shiradi Ghat on National Highway 75, severely disrupting both road and rail traffic between Bengaluru and Mangaluru.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm