ಬ್ರೇಕಿಂಗ್ ನ್ಯೂಸ್
16-08-25 11:11 pm Mangalore Correspondent ಕರಾವಳಿ
ಮಂಗಳೂರು, ಆ.16 : ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡರೆ, ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿಯಿಂದ ಹಲವೆಡೆ ಗುಡ್ಡ ಕುಸಿದಿದ್ದು ಮರ, ಗಿಡಗಳ ಸಮೇತ ರಸ್ತೆಗೆ ಗುಡ್ಡ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಘಾಟ್ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಸಂಜೆಯಿಂದಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಶಿರಾಡಿ ಘಾಟ್ ಭಾಗದ ಹಲವೆಡೆ ಕುಸಿತ ಆಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಿಲುಕಿದ್ದು ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರಗಳು ರಸ್ತೆಗೆ ಬಿದ್ದಿದ್ದು ಮರಗಳನ್ನು ತೆರವುಗೊಳಿಸಲು ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ಇದೇ ವೇಳೆ, ಶಿರಾಡಿ ಘಾಟಿಯಲ್ಲಿ ರೈಲು ಹಳಿಯ ಮೇಲೂ ಮಣ್ಣು ಕುಸಿಯುತ್ತಿದ್ದು ರೈಲು ಸಂಚಾರದಲ್ಲು ವ್ಯತ್ಯಯವಾಗಿದೆ. ಬೆಂಗಳೂರು - ಕಾರವಾರ ರೈಲನ್ನು ಹಾಸನದ ಬಳಿಕ ಡೈವರ್ಟ್ ಮಾಡಿದ್ದು ಸುಬ್ರಹ್ಮಣ್ಯ ಹಳಿಯ ಬದಲು ಹುಬ್ಬಳ್ಳಿ ಮೂಲಕ ಕಾರವಾರ ತಲುಪುವಂತೆ ಮಾಡಲಾಗಿದೆ.
ಹಾಸನ ರೈಲಿನಲ್ಲಿ ಬೆಂಕಿ, ನಂದಿಸಿದ ಸಿಬಂದಿ
ಇದೇ ವೇಳೆ, ಚಲಿಸುತ್ತಿದ್ದ ರೈಲಿನ ಬೋಗಿಯ ಅಡಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತು ಹಾಸನ ರೈಲ್ವೇ ನಿಲ್ದಾಣದಲ್ಲಿ ಬೆಂಕಿ ನಂದಿಸಿ ಸಿಬಂದಿ ಅಪಾಯ ತಪ್ಪಿಸಿದ್ದಾರೆ. ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ತಕ್ಷಣವೇ ಇದನ್ನು ಗಮನಿಸಿದ ಸಿಬಂದಿ ಬೆಂಕಿ ನಂದಿಸಿದ್ದಾರೆ.
Heavy rainfall in the Malnad region has triggered a massive landslide at Shiradi Ghat on National Highway 75, severely disrupting both road and rail traffic between Bengaluru and Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm