ಬ್ರೇಕಿಂಗ್ ನ್ಯೂಸ್
17-08-25 05:26 pm Mangalore Correspondent ಕರಾವಳಿ
ಉಳ್ಳಾಲ, ಆ.17 : ತೊಕ್ಕೊಟ್ಟಿನಲ್ಲಿ ನಿನ್ನೆ ನಡೆದಿದ್ದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಪೇದೆಗೆ ಅಶ್ಲೀಲ ಕೈ ಸನ್ನೆ ಮಾಡಿ ಸೊಂಟಕ್ಕೆ ಕೈ ಹಾಕಿ ಮಾನಭಂಗ ಮಾಡಿದ ಆರೋಪದಲ್ಲಿ ಇಬ್ಬರು ಅರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟಿನ ಜೈ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಘಟನೆ ನಡೆದಿದೆ.





ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ನಾಸಿಕ್ ಬ್ಯಾಂಡ್ ನ ಯುವಕರ ತಂಡವೊಂದು ರಾತ್ರಿ 11.50 ರ ವೇಳೆಗೆ ತೊಕ್ಕೊಟ್ಟು ಒಳಪೇಟೆಯ ತಾಜ್ ಸೈಕಲ್ ಶಾಪ್ ಬಳಿ ತಲುಪಿದಾಗ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಕಾಲಹರಣ ಮಾಡಿಕೊಂಡು ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ನಡೆದಾಡಲು ಅವಾಕಶ ನೀಡದೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಪೇದೆ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ ಹೋಗುವಂತೆ ಹೇಳಿದಾಗ ಆರೋಪಿ ದೀಪಕ್ ಎಂಬಾತ ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮ ಅವರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ, ನೀವು ಯಾರು ಮುಂದಕ್ಕೆ ಹೋಗಿ ಅಂತ ಹೇಳಲು. ಪೊಲೀಸರು ಚಪ್ರಿಗಳು ಅಂತ ಹೇಳಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ.
ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರ ಸೊಂಟಕ್ಕೆ ಕೈ ಹಾಕಿ ತಳ್ಳಿದ್ದು, ಮೈಗೆ ಕೈ ಹಾಕಿ ಮಾನಭಂಗ ಮಾಡಿರೋದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಘಟನೆ ವೇಳೆ ಪೊಲೀಸರು ಮತ್ತು ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ನಡುವೆ ತಳ್ಳಾಟ ನಡೆದಿದೆ. ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಬಿಎನ್ ಎಸ್ 2023(U/s-126(2), 132, 74, 3(5) ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.
🚨 Tension at Mosaru Kudike Procession 🚨
— Headline Karnataka (@hknewsonline) August 17, 2025
Two youths — Deepak (Asaigoli) & Kiran (Thokottu) — arrested for obstructing #police duty & misbehaving with a woman constable during the #Thokottu festival procession. #Mangalore #BREAKING pic.twitter.com/Wh2vr4fzPe
Tension broke out during the Mosaru Kudike festival procession at Tokkottu last night after two youths allegedly obstructed police duty and misbehaved with a woman constable. The Ullal police have arrested the accused, identified as Deepak from Asaigoli and Kiran from Thokottu
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm