ಬ್ರೇಕಿಂಗ್ ನ್ಯೂಸ್
19-08-25 08:28 pm Mangalore Correspondent ಕರಾವಳಿ
ಉಳ್ಳಾಲ, ಆ.19 : ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತರನ್ನಾಗಿ ಪಿಡಿಒ ದರ್ಜೆಯ ಅಧಿಕಾರಿಯೋರ್ವರನ್ನು ನೇಮಿಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರಗದೇ ಇರುವುದು ಆಡಳಿತದಲ್ಲೇ ಲೋಪವಾಗಿರುವುದು ಕಂಡು ಬರುತ್ತದೆ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಉಳ್ಳಾಲದಲ್ಲಿ ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯದಲ್ಲಿ ಮುಂದುವರಿದಿರುವ ಪಿಡಿಓ ಅಧಿಕಾರಿಯನ್ನ ತಕ್ಷಣವೇ ಅವರ ಮಾತೃ ಇಲಾಖೆಗೆ ಕಳುಹಿಸಬೇಕೆಂದು ವಕೀಲರಾದ ಅಫ್ಜಲ್ ಎಂಬವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಿಂದ ಉಳ್ಳಾಲ ನಗರಸಭೆಯಲ್ಲಿ ಮಂಗಳವಾರ ನಡೆದ ಲೋಕಾಯುಕ್ತ ಅದಾಲತ್ತಲ್ಲಿ ಅಪ್ಝಲ್ ಅವರು ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತ ನವೀನ್ ಹೆಗ್ಡೆ ವಿರುದ್ಧ ದೂರು ಸಲ್ಲಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಹೊಸಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿರುವ ನವೀನ್ ಹೆಗ್ಡೆ ಸರಕಾರದ ಯಾವುದೇ ಸುತ್ತೋಲೆ, ಆದೇಶ, ಟಿಪ್ಪಣಿಗಳಿಲ್ಲದೆ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುರಿತಂತೆ ಕಳೆದ ಆಗಸ್ಟ್ 5ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ದೂರು ಅರ್ಜಿಯನ್ನು ಸಲ್ಲಿಸಿದ್ದೆ. ಆದರೆ ಇದುವರೆಗೂ ಆರೋಪಿ ನವೀನ್ ಹೆಗ್ಡೆಯನ್ನ ಮಾತೃ ಇಲಾಖೆಗೆ ಕಳುಹಿಸದೆ ಉಳ್ಳಾಲ ನಗರಸಭೆ ಆಡಳಿತದಲ್ಲೇ ಪ್ರಭಾರ ಪೌರಾಯುಕ್ತರನ್ನಾಗಿಸಿ ಮುಂದುವರಿಸಿರುವುದು ಆಡಳಿತದಲ್ಲಿ ಲೋಪವಾಗಿರುವುದು ಕಂಡುಬರುತ್ತದೆ. ಆದುದರಿಂದ ನ್ಯಾಯಪ್ರತೀಕರಾದ ತಾವುಗಳು ಈ ಪ್ರಕರಣವನ್ನು ಅತೀ ಗಂಭೀರವೆಂದು ಪರಿಗಣಿಸಿ ಆರೋಪಿ ನವೀನ್ ಹೆಗ್ಡೆ ಅವರನ್ನ ತಕ್ಷಣವೇ ಮಾತೃ ಇಲಾಖೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಲೋಕಾಯುಕ್ತಕ್ಕೆ ವಕೀಲರಾದ ಅಫ್ಝಲ್ ಅವರು ಲಿಖಿತ ದೂರು ಸಲ್ಲಿಸಿದ್ದಾರೆ.



ಈ ಹಿಂದೆ ಉಳ್ಳಾಲ ನಗರಸಭೆಯಲ್ಲಿ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಅವರು ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಜೂನ್ ತಿಂಗಳ ಆರಂಭದಲ್ಲಿ ಮತ್ತಡಿ ಅವರನ್ನ ಪ್ರಭಾರ ಪೌರಾಯುಕ್ತ ಸ್ಥಾನದಿಂದ ವಿಮುಕ್ತಿಗೊಳಿಸಿ ನವೀನ್ ಹೆಗ್ಡೆಯವರನ್ನ ದಿಢೀರನೆ ಪ್ರಭಾರ ಪೌರಾಯುಕ್ತ ಸ್ಥಾನದಲ್ಲಿ ಕುಳ್ಳಿರಿಸಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು.
ಸರಕಾರದ ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಪ್ರಕಾರ ಸ್ಥಳೀಯಾಡಳಿತದ ಪೌರಾಯುಕ್ತರು ವರ್ಗಾವಣೆ ಅಥವಾ ತರಬೇತಿಗೆ ನಿಯೋಜನೆಗೊಂಡಲ್ಲಿ ಪ್ರಭಾರ ಪೌರಾಯುಕ್ತ ಸ್ಥಾನಕ್ಕೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಅಥವಾ ಸಹಾಯಕ ಅಭಿಯಂತರರನ್ನ ನೇಮಿಸಬೇಕೆಂಬ ಆದೇಶವಿದೆ. ಆದರೆ ಈ ಆದೇಶಗಳನ್ನ ಧಿಕ್ಕರಿಸಿ ಪಿಡಿಒ ದರ್ಜೆಯ ನವೀನ್ ಹೆಗ್ಡೆ ಅವರನ್ನ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತ ಸ್ಥಾನದಲ್ಲಿ ಕುಳ್ಳಿರಿಸಿರೋದು ವ್ಯಾಪಕ ಟೀಕೆಗೆ ಕಾರಣವಾಗಿದೆ.
ನಗರಸಭೆಯಲ್ಲಿ ನಡೆದ ಲೋಕಾಯುಕ್ತ ಅದಾಲತ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹದಿನೈದರಷ್ಟು ದೂರುಗಳು ಸಲ್ಲಿಕೆಯಾಗಿವೆ. ಕರ್ನಾಟಕ ಲೋಕಾಯುಕ್ತದ ಪ್ರಭಾರ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ, ಉಳ್ಳಾಲ ತಾಲೂಕು ದಂಡಾಧಿಕಾರಿ ಪ್ರಶಾಂತ್ ಪಾಟೀಲ್, ಮಂಗಳೂರು ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕಿ ಗಾನ ಪಿ.ಕುಮಾರ್, ಇನ್ಸ್ ಪೆಕ್ಟರ್ ಭಾರತಿ, ಉಳ್ಳಾಲ ನಗರಸಭೆ ಪ್ರಭಾರ ಪೌರಾಯುಕ್ತ ನವೀನ್ ಹೆಗ್ಡೆ ಲೋಕಾಯುಕ್ತ ಅದಾಲತ್ ನಲ್ಲಿ ಉಪಸ್ಥಿತರಿದ್ದರು.
A major administrative lapse has been alleged in Ullal City Municipality after a Panchayat Development Officer (PDO)-rank official was appointed as in-charge Commissioner without any government notification or order.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am