ಬ್ರೇಕಿಂಗ್ ನ್ಯೂಸ್
10-08-20 02:15 pm Headline Karnataka News Network ಕರಾವಳಿ
ನವದೆಹಲಿ: ಕಾಂಗ್ರೆಸ್ ಬಂಡಾಯ ನಾಯಕ ಸಚಿನ್ ಪೈಲಟ್ ಸೋಮವಾರ(ಆಗಸ್ಟ್ 10, 2020) ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿರುವುದಾಗಿ ವರದಿ ತಿಳಿಸಿದೆ.
ಮೂಲಗಳ ಪ್ರಕಾರ, ರಾಹುಲ್ , ಪ್ರಿಯಾಂಕಾ ಜತೆಗಿನ ಮಾತುಕತೆ ನಡೆಸಿರುವ ಬೆಳವಣಿಗೆ ಸಚಿನ್ ಪೈಲಟ್ ಗೆ ತೃಪ್ತಿ ತಂದಿದ್ದು, ಬಹುತೇಕ ರಾಜಸ್ಥಾನ್ ರಾಜಕೀಯ ಜಿದ್ದಾಜಿದ್ದಿ ಕೊನೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವಿವರಿಸಿದೆ.
ರಾಹುಲ್, ಪ್ರಿಯಾಂಕಾ ಜತೆಗಿನ ಮಾತುಕತೆ ವೇಳೆ ಸಚಿನ್ ಪೈಲಟ್ ತನ್ನ(ಮೂರು) ಬೇಡಿಕೆಯ ಪಟ್ಟಿಯನ್ನು ಇಟ್ಟಿದ್ದು, ಬೇಡಿಕೆ ಈಡೇರಿಸಿದರೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧದ ಬಂಡಾಯ ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ಸಚಿನ್ ಪೈಲಟ್ ಹಾಗೂ 18 ಮಂದಿ ರಾಜಸ್ಥಾನ್ ಶಾಸಕರು ಬಂಡಾಯ ಸಾರಿದ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಪೈಲಟ್ ಹಾಗೂ ಹಾಗೂ ಆಪ್ತ ಶಾಸಕರು ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗದ್ದುಗೆಯಿಂದ ಇಳಿಸಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹಬ್ಬಿತ್ತು.
ಇದೆಲ್ಲಾ ಸತ್ಯಕ್ಕೆ ದೂರವಾದ ವಿಷಯ ಎಂದಿರುವ ಸಚಿನ್ ಪೈಲಟ್ ತಾನು ಯಾರನ್ನೂ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ತಾವು ರಾಹುಲ್ ಮತ್ತು ಪ್ರಿಯಾಂಕಾ ಜತೆ ನಡೆಸಿದ ಮಾತುಕತೆಯಲ್ಲಿ ಬೇಡಿಕೆಗಳ ಪಟ್ಟಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಏನಿದು ಮೂರು ಬೇಡಿಕೆ:
1)ಸಚಿನ್ ಪೈಲಟ್ ಮುಂದಿನ ಮುಖ್ಯಮಂತ್ರಿ ಎಂದು ಸಾರ್ವಜನಿಕವಾಗಿ ಘೋಷಿಸಬೇಕು
2)ಒಂದು ಅದು ಸಾಧ್ಯವಾಗದಿದ್ದರೆ, ಸಚಿನ್ ಪೈಲಟ್ ಗುಂಪಿನ ಇಬ್ಬರು ಹಿರಿಯ ಮುಖಂಡರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಮತ್ತು ಉಳಿದ ಶಾಸಕರನ್ನು ಕ್ಯಾಬಿನೆಟ್ ಅಥವಾ ನಿಗಮ, ಮಂಡಳಿ, ಕಾರ್ಪೋರೇಶನ್ ಗಳಿಗೆ ನೇಮಕ ಮಾಡಬೇಕು. ಸಚಿನ್ ಪೈಲಟ್ ಗೆ ದಿಲ್ಲಿಯಲ್ಲಿ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಹುದ್ದೆ ನೀಡಬೇಕು.
3)ಗೌರವಯುತವಾಗಿ ಪಕ್ಷಕ್ಕೆ ವಾಪಸ್ ಆದ ಮೇಲೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಹುಲ್ ಗಾಂಧಿ ನೀಡಿರುವ ಭರವಸೆಯನ್ನು ಈಡೇರಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಬೇಕು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm