ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am