ಬ್ರೇಕಿಂಗ್ ನ್ಯೂಸ್
21-08-25 09:35 pm HK News Desk ಕರಾವಳಿ
ಉಡುಪಿ, ಆ.21 : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧರ್ಮಸ್ಥಳದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಬಗ್ಗೆ ವೈಯಕ್ತಿಕ ವಿಚಾರದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿ ಮಾತನಾಡಿದ್ದಾರೆಂದು ಬ್ರಹ್ಮಾವರ ಠಾಣೆ, ಉಳ್ಳಾಲ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದೂರು ದಾಖಲಾಗಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರದ ಠಾಣೆಯಲ್ಲಿ 352 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎರಡು ಬಾರಿ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದಕ್ಕೆ ಸರಿಯಾದ ಉತ್ತರ ನೀಡದೆ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಇದಲ್ಲದೆ, ಮಹೇಶ್ ಶೆಟ್ಟಿಯವರು ಧರ್ಮಸ್ಥಳ ವಿರುದ್ಧ ನಿರಂತರ ಹೇಳಿಕೆ ನೀಡುತ್ತ ಜನರನ್ನು ಪ್ರಚೋದಿಸಲು ಕಾರಣವಾಗಿದ್ದರು. ಇದರಿಂದಾಗಿ ಧರ್ಮಸ್ಥಳ ಪರ ಇರುವವರು ತಿಮರೋಡಿ ಬಂಧನಕ್ಕೆ ಆಗ್ರಹ ಮಾಡಿದ್ದರು. ಗೃಹ ಸಚಿವ ಪರಮೇಶ್ವರ್ ಕೂಡ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್ ಅವರೂ ತಿಮರೋಡಿ ಬಂಧನಕ್ಕೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಸಾರ್ವಜನಿಕ ಶಾಂತಿ ಕದಡುತ್ತಿದ್ದಾರೆಂದು ಹೇಳಿ ಜಾಮೀನು ನಿರಾಕರಿಸಿ ಜೈಲಿಗೆ ತಳ್ಳಿದ್ದಾರೆ. ಇವರ ಜಾಮೀನು ಅರ್ಜಿಯನ್ನು ಆ.23ಕ್ಕೆ ಇಡಲಾಗಿದೆ.
ಬೆಳ್ತಂಗಡಿಗೆ ಬಂದಿದ್ದ ಬ್ರಹ್ಮಾವರ ಪೊಲೀಸರು ತಿಮರೋಡಿಯ ಮನೆಯಿಂದಲೇ ಮಹೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದಿದ್ದರು. ಖಾಸಗಿ ಕಾರಿನಲ್ಲೇ ತಿಮರೋಡಿ ಅವರನ್ನು ಪೊಲೀಸರು ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳ ಭದ್ರತೆಯಲ್ಲಿ ಉಡುಪಿಗೆ ಕರೆದೊಯ್ದಿದ್ದರು. ಠಾಣೆಯಲ್ಲೇ ಜಾಮೀನು ಸಿಗುತ್ತೆ ಎನ್ನುವ ಭರವಸೆಯಿಂದ ಮಹೇಶ್ ಶೆಟ್ಟಿ ತನ್ನ ಬೆಂಬಲಿಗರ ಜೊತೆಗೆ ಉಡುಪಿಗೆ ತೆರಳಿದ್ದರು. ಬೆಂಬಲಿಗರು ಜೈಕಾರ ಕೂಗಿದರೆ, ಮಹೇಶ್ ಶೆಟ್ಟಿ ಕಾರಿನಲ್ಲಿ ಕುಳಿತು ತನ್ನ ಜೀವಕ್ಕೇನಾದರೂ ಆದರೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದರು.
Police have arrested activist Mahesh Shetty Timarodi, known for his campaigns in support of Soujanya’s case in Dharmasthala, on charges of making derogatory remarks against BJP National General Secretary (Organization) B.L. Santhosh.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm