ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am