ಬ್ರೇಕಿಂಗ್ ನ್ಯೂಸ್
24-08-25 02:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ 24 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಅಪರಾಧ ಕೃತ್ಯಗಳ ಆರೋಪ ಬಗ್ಗೆ AI ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಕೇಸ್ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕರೆದಾಗ ವಿಚಾರಣೆಗೆ ಹಾಜರಾಗಲು ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿ ಅವರ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.
ನಾಲ್ವರು ವಕೀಲರ ಜೊತೆ ಬಂದ ಸಮೀರ್ :
ತಿಮರೋಡಿಯ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಬಂದ ಸಮೀರ್ ವಿಚಾರಣೆಗೆಂದು ಠಾಣೆ ಒಳಗೆ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ರು.
ಕ್ರೈಮ್ ನಂ 42/2025 ಕೇಸ್ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಸಮೀರ್ ಹಾಜರಾಗಿರಲಿಲ್ಲ.
ಬಂಧನ ಭೀತಿಯಲ್ಲಿದ್ದ ಸಮೀರ್ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆಗೆ ಸಹಕರಿಸುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.
YouTuber M.D. Sameer, who had created an AI-generated video related to alleged criminal incidents in Dharmasthala, appeared for police inquiry today at the Beltangady Police Station, accompanied by four lawyers. A case had been registered against him in connection with the video, and he was recently granted anticipatory bail by the Dakshina Kannada District Sessions Court.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm