ಬ್ರೇಕಿಂಗ್ ನ್ಯೂಸ್
26-08-25 10:57 pm Mangalore Correspondent ಕರಾವಳಿ
ಮಂಗಳೂರು, ಆ.26 : ಧರ್ಮಸ್ಥಳ ಪ್ರಕರಣದಲ್ಲಿ ಸಮಾಜ ವಿರೋಧಿ ಶಕ್ತಿಗಳು ಒಗ್ಗೂಡಿದ್ದು ಹಿಂದುಗಳ ಶ್ರದ್ಧಾಕೇಂದ್ರವನ್ನು ಅಪಮಾನಿಸುವ ಕೆಲಸ ಮಾಡುತ್ತಿದ್ದಾರೆ. ಸಮೀರ್ ಎಂ.ಡಿ ಎಂಬಾತ ಸಾವಿರಾರು ಜನರನ್ನು ಹೂತು ಹಾಕಲಾಗಿದೆ ಎಂದು ಸುದ್ದಿ ಹಬ್ಬಿಸಿದರೆ, ಈಗ ಕ್ರಿಶ್ಚಿಯನ್ ಪಾದ್ರಿಯೊಬ್ಬ ನಕಲಿ ಮಾನವ ಹಕ್ಕು ಆಯೋಗದ ಹೆಸರಲ್ಲಿ ರೌಡಿಶೀಟರ್ ಜೊತೆಗೆ ತನಿಖೆಗೆ ಬಂದಿದ್ದಾನೆ. ಇದನ್ನು ನೋಡಿದರೆ ಇದರಲ್ಲಿ ಭಾರೀ ದೊಡ್ಡ ಷಡ್ಯಂತ್ರ ಇರುವುದು ಸ್ಪಷ್ಟವಾಗುತ್ತಿದೆ. ಕ್ರಿಶ್ಚಿಯನ್ ಮತ ಪ್ರಚಾರಕನಿಗೆ ಧರ್ಮಸ್ಥಳ ಕ್ಷೇತ್ರದಲ್ಲೇನು ಕೆಲಸ, ಇವರಿಗೆಲ್ಲ ಫಂಡಿಂಗ್ ಮಾಡಿರೋದು ಯಾರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿ ನಡೆಸಿದ ಅವರು, ಜಾನ್ ಶೈಮನ್ ಎಂಬಾತ ನಕಲಿ ಮಾನವ ಹಕ್ಕುಗಳ ಆಯೋಗದ ಹೆಸರಲ್ಲಿ ಬೆಳ್ತಂಗಡಿಗೆ ಬಂದಿದ್ದಾನೆ. ಜೊತೆಗೆ ಹುಬ್ಬಳ್ಳಿಯ ರೌಡಿ ಶೀಟರ್ ಮದನ್ ಬುಗಡಿ ಎಂಬಾತನನ್ನೂ ಆಯೋಗದ ಅಧಿಕಾರಿಯೆಂದು ಕರೆತಂದಿದ್ದಾನೆ. ಇವರಿಗೆ ಧರ್ಮಸ್ಥಳದಲ್ಲಿ ಯಾವ ರೀತಿಯ ಕೆಲಸ ಎಂಬುದನ್ನು ತನಿಖೆ ಮಾಡಬೇಕು. ಇಂತಹ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್ ಆಗಿದೆ, ವ್ಗವಸ್ಥಿತವಾಗಿ ಸಂಚು ನಡೆಸಿದ್ದಾರೆಂಬ ಸಂಶಯ ಜನರಲ್ಲಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆಗಬೇಕು ಎಂದರು.
ಶಾಸಕ ಭರತ್ ಶೆಟ್ಟಿ ಮಾತನಾಡಿ, ಸಮೀರನಿಗೆ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಲು ಸಾಕಷ್ಟು ಫಂಡಿಂಗ್ ಆಗಿದೆ. ವಿದೇಶದಿಂದ ಹಣ ರವಾನೆ ಆಗಿರುವುದನ್ನು ಪತ್ತೆ ಮಾಡಲು ಎನ್ಐಎ ತನಿಖೆ ಮಾಡಬೇಕು ಎಂದರು. ಆದರೆ ಎಸ್ಐಟಿ ತನಿಖೆ ಆಗ್ತಿರುವಾಗ ಎನ್ಐಎ ಯಾಕೆ ಬೇಕು ಎಂದು ಕೇಳಿದ ಪ್ರಶ್ನೆಗೆ, ಎಸ್ಐಟಿ ತನಿಖೆ ಆಗ್ತಾ ಇದೆ. ವಿದೇಶಿ ಫಂಡಿಂಗ್, ಷಡ್ಯಂತ್ರದ ಬಗ್ಗೆ ಮಾತ್ರ ತನಿಖೆಯನ್ನು ಕೇಂದ್ರೀಯ ಏಜೆನ್ಸಿಗಳು ಮಾಡಬೇಕು. ಅದರಿಂದ ತನಿಖೆಗೆ ಹೆಚ್ಚು ಅನುಕೂಲ ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರೇಮಾನಂದ ಶೆಟ್ಟಿ, ಸಂಜಯ ಪ್ರಭು, ವಸಂತ ಪೂಜಾರಿ ಮತ್ತಿತರರಿದ್ದರು.
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಚಾರ ನಡೆಸುವುದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಸೆ.1ರಂದು ಇಡೀ ರಾಜ್ಯದಿಂದ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ಬರಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಸೂಚನೆಯಂತೆ ಎಲ್ಲ ಜಿಲ್ಲೆಗಳಿಂದಲೂ ಕಾರು, ಬಸ್ ಗಳಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಬರಲಿದ್ದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಧರ್ಮಸ್ಥಳ ಕ್ಷೇತ್ರಕ್ಕೆ ಬಲ ತುಂಬಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದರು.
BJP leaders have alleged a major conspiracy behind the recent controversies surrounding Dharmasthala, claiming that anti-social forces are deliberately attempting to tarnish the sanctity of one of the most revered Hindu religious centers. BJP Dakshina Kannada district president Satish Kumpala has demanded a National Investigation Agency (NIA) probe into suspected foreign funding and the alleged involvement of Christian evangelist John Shamine under the guise of human rights activists.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm