ಬ್ರೇಕಿಂಗ್ ನ್ಯೂಸ್
27-08-25 09:19 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.27 : ಧರ್ಮಸ್ಥಳ ನೂರಾರು ಹೆಣಗಳನ್ನು ಹೂತ ಪ್ರಕರಣ ದೂರುದಾರನಿಗೇ ಉಲ್ಟಾ ಹೊಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಅಧಿಕಾರಿಗಳು, ದೂರುದಾರ ಚಿನ್ನಯ್ಯನನ್ನು ಎ 1 ಆರೋಪಿಯನ್ನಾಗಿಸಿ ಬಿಎನ್ಎಸ್ ಹಲವು ಸೆಕ್ಷನ್ ಗಳಡಿ ಹೊಸ ಎಫ್ಐಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ.
ನಾಲ್ಕು ದಿನಗಳ ಹಿಂದೆ ದೂರುದಾರ ವ್ಯಕ್ತಿಯನ್ನು ಬಂಧಿಸಿದ ಬಳಿಕ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿ, ಹತ್ತು ದಿನ ಕಸ್ಟಡಿಗೆ ಪಡೆದಿದ್ದರು. ಈ ವೇಳೆ, ಚಿನ್ನಯ್ಯನನ್ನೇ ಆರೋಪಿಯನ್ನಾಗಿಸಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಿದ್ದು ಷಡ್ಯಂತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎಸಗುವ ಉದ್ದೇಶದಿಂದಲೇ ಇದೆಲ್ಲವನ್ನೂ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಚಿನ್ನಯ್ಯನನ್ನು ಆಶ್ರಯ ನೀಡಿದ್ದಾರೆ ಎನ್ನಲಾದ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಕರೆತಂದು ಮಹಜರು ನಡೆಸಿದ್ದಾರೆ.

ಆದರೆ ಈ ವೇಳೆ, ಮಹೇಶ ಶೆಟ್ಟಿ ತನ್ನ ಮನೆಯಲ್ಲಿ ಉಳಿಯದೆ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಮನೆಯನ್ನು ಶೋಧ ನಡೆಸಿದ್ದು ಚಿನ್ನಯ್ಯನಿಗೆ ಸೇರಿದ ಮೊಬೈಲ್ ಸಿಕ್ಕಿದೆ ಎನ್ನಲಾಗುತ್ತಿದೆ. ಇದಲ್ಲದೆ, ಮನೆಯಲ್ಲಿದ್ದ ಮಹೇಶ್ ಶೆಟ್ಟಿ ಪತ್ನಿ, ಇಬ್ಬರು ಮಕ್ಕಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯ ಸಿಸಿಟಿವಿ ಡಿವಿಆರ್ ಅನ್ನೂ ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. 2-3 ತಿಂಗಳಲ್ಲಿ ಮನೆಗೆ ಯಾರೆಲ್ಲ ಬಂದಿದ್ದಾರೆ, ಇವರ ಮನೆಯಲ್ಲೇ ಷಡ್ಯಂತ್ರ ಮಾಡಲಾಗಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದಾಗುತ್ತಿದ್ದಂತೆ ಎಸ್ಐಟಿ, ಷಡ್ಯಂತ್ರ ಹೆಣೆದ ಆರೋಪದಲ್ಲಿ ಮತ್ತಷ್ಟು ಸೆಕ್ಷನ್ ಗಳನ್ನು ದಾಖಲಿಸಿದೆ.
ಮೂಲಗಳಿಂದ ದೊರೆತ ಮಾಹಿತಿಗಳ ಪ್ರಕಾರ ಎಸ್ಐಟಿ ದಾಖಲಿಸಿರುವ ಎಫ್ಐಆರ್ ನಲ್ಲಿ ಹೆಚ್ಚುವರಿಯಾಗಿ BNS 336 (ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರನ್ನು ಭೀತಿಗೊಳಿಸುವುದು), 230 (ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವುದು), 231 (ನ್ಯಾಯಾಲಯದ ಕಾರ್ಯಕ್ಕೆ ಅಡ್ಡಿಪಡಿಸುವುದು) 229 (ಸುಳ್ಳು ಸಾಕ್ಷ್ಯ ನೀಡುವುದು), 227 (ಸಾರ್ವಜನಿಕ ಶಾಂತಿ ಕದಡುವುದು), 228 (ನ್ಯಾಯಾಲಯಕ್ಕೆ ಅಪಮಾನ ಮಾಡುವುದು), 240 (ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕು ತಪ್ಪಿಸುವುದು), 236 (ಪಿತೂರಿ), 233 (ತಪ್ಪಾಗಿ ಜನರನ್ನು ಪ್ರೇರೇಪಿಸುವುದು) ಮತ್ತು 248 (ಸುಳ್ಳು ದೂರು ನೀಡಿ ಸಮಯ ಹಾಳು ಮಾಡುವುದು) ಇತ್ಯಾದಿ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡಿದೆ.
ಹೊಸ ಎಫ್ಐಆರ್ ನಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ, ಷಡ್ಯಂತ್ರ ಇತ್ಯಾದಿ ಆರೋಪಗಳಿದ್ದು ಇತರರು ಎಂದು ಆರೋಪಿಗಳನ್ನು ಹೆಸರಿಸಿರುವ ಸಾಧ್ಯತೆಯಿದೆ. ಮಹೇಶ್ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್ ಅವರನ್ನೂ ಕೇಸಿನಲ್ಲಿ ಸೇರಿಸಿದ್ದರೆ ಬಂಧನಕ್ಕೆ ಬಲೆ ಬೀಸುವುದು ಖಚಿತವಾಗಿದೆ. ಈ ಬಗ್ಗೆ ಎಸ್ಐಟಿ ಖಚಿತ ಮಾಹಿತಿ ನೀಡಿಲ್ಲ.
In a dramatic twist in the high-profile Dharmasthala case involving alleged mass burials, the investigation has taken a turn against the original complainant. Sources reveal that the Special Investigation Team (SIT) has now named the complainant, Chinnayya, as Accused No. 1 in a fresh FIR, citing conspiracy and misinformation under several sections of the Bharatiya Nyaya Sanhita (BNS).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am