ಬ್ರೇಕಿಂಗ್ ನ್ಯೂಸ್
27-08-25 11:02 pm Mangalore Correspondent ಕರಾವಳಿ
ಮಂಗಳೂರು, ಆ.27 : ಅಂತಾರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೆಸರಿನಲ್ಲಿ ಬೆಳ್ತಂಗಡಿಗೆ ಬಂದು ಡ್ರಾಮಾ ಸೃಷ್ಟಿಸಿರುವ ಹುಬ್ಬಳ್ಳಿಯ ರೌಡಿಶೀಟರ್ ಮದನ್ ಮುಗಡಿ ಮತ್ತು ಬೆಂಗಳೂರಿನ ಪ್ಯಾಸ್ಟರ್ ಜಾನ್ ಶೈಮನ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ. ತಮ್ಮ ಬಗ್ಗೆ ಟೀಕೆ ಕೇಳಿಬರುತ್ತಲೇ ಜಾನ್ ಶೈಮನ್, ತನ್ನ ಕ್ರೈಸ್ತ ಬಳಗದವರನ್ನು ಉದ್ದೇಶಿಸಿ ಯೂಟ್ಯೂಬ್ ನಲ್ಲಿ ವಿಡಿಯೋ ಬಿಟ್ಟಿದ್ದಾನೆ.
ಮದನ್ ಮುಗಡಿ ಹಿಂದೆ ರೌಡಿಸಂ ಮಾಡುತ್ತಿದ್ದರೂ, ಈಗ ಅಪರಾಧ ಚಟುವಟಿಕೆಯಿಂದ ದೂರ ಇರುವುದಲ್ಲದೆ, ಕ್ರಿಶ್ಚಿಯನ್ ಆಗಿ ಮತಾಂತರ ಆಗಿದ್ದಾರೆ. ನಮ್ಮಲ್ಲಿ ಸನ್ನಡತೆಯಿಂದ ನಡೆದುಕೊಳ್ಳುವುದಾಗಿ ಮತ್ತು ಆಯೋಗದ ಸದಸ್ಯನೆಂದು ಪ್ರಮಾಣವಚನ ಸ್ವೀಕರಿಸಿದ್ದಾನೆ. ಆದರೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ ನಮ್ಮ ಬಗ್ಗೆ ವಿನಾಕಾರಣ ಸುದ್ದಿ ಪ್ರಸಾರಿಸಿ ಮಾನಹಾನಿ ಮಾಡಲಾಗಿದೆ. ನಮ್ಮ ವಿರುದ್ಧ ಸುದ್ದಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಈ ವಿಡಿಯೋದಲ್ಲಿ ತಿಳಿಸಿದ್ದಾನೆ.

ಅಲ್ಲದೆ, ಈ ಸುದ್ದಿಯನ್ನು ಯಾರೂ ನಂಬಬೇಡಿ. ಸಮಾಜದಲ್ಲಿ ಶೋಷಿತರು, ದಲಿತರು, ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾದವರು, ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ಮಾಡಿದ್ದೆವು. ನಮ್ಮ ಸಂಘಟನೆ ಕೇಂದ್ರ ಸರ್ಕಾರದ ನೀತಿ ಆಯೋಗದಲ್ಲಿ ರಿಜಿಸ್ಟರ್ ಆಗಿದ್ದು ಸರ್ಕಾರದ ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಿದೆ. ಯಾರೋ ಒಬ್ಬರು ಫೋನ್ ಕರೆ ಮಾಡಿದ್ದಕ್ಕೆ ಬೆಳ್ತಂಗಡಿಗೆ ಹೋಗಿದ್ದೆವು, ಅಲ್ಲಿ ಬೇರಾವುದೇ ಅಪಚಾರ ಮಾಡಿಲ್ಲ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ವಿಡಿಯೋದಲ್ಲಿ ಹೆಡ್ ಲೈನ್ ಕರ್ನಾಟಕದಲ್ಲಿ ಬಂದಿರುವ ಸುದ್ದಿ ತುಣುಕನ್ನೂ ಹಾಕ್ಕೊಂಡಿದ್ದಾನೆ.

ಮಟ್ಟೆಣ್ಣನವರ್ ವಿರುದ್ದ ಆಯೋಗಕ್ಕೆ ದೂರು
ಇದೇ ವೇಳೆ, ಬೆಂಗಳೂರಿನ ಸುರೇಶ್ ಗೌಡ ಎಂಬವರು ಗಿರೀಶ್ ಮಟ್ಟೆಣ್ಣನವರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ರೌಡಿಯೊಬ್ಬನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ಗಿರೀಶ್ ಮಟ್ಟೆಣ್ಣನವರ್ ಮಾಧ್ಯಮ ಮತ್ತು ಧರ್ಮಸ್ಥಳ ಪೊಲೀಸರ ಮುಂದೆ ಹೇಳಿಕೊಂಡಿದ್ದು ಆಮೂಲಕ ಇಲಾಖೆಯ ಹೆಸರನ್ನು ದುರುಪಯೋಗ ಪಡಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
Madan Bugadi, a known rowdy-sheeter from Hubballi who has reportedly converted to Christianity, and Pastor John Shaiman from Bengaluru are now facing severe criticism for allegedly staging a “drama” in Belthangady under the banner of the International Human Rights Commission. In response to growing backlash, Pastor John Shaiman released a video on YouTube addressing his Christian followers. In the video, he defended Madan Bugadi, stating that although he had a criminal past, he has since reformed, embraced Christianity, and taken an oath as a member of their commission.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm