ಬ್ರೇಕಿಂಗ್ ನ್ಯೂಸ್
29-08-25 10:54 pm Mangalore Correspondent ಕರಾವಳಿ
ಮಂಗಳೂರು, ಆ.29 : ಕರಾವಳಿಯಲ್ಲಿ ಗಣೇಶೋತ್ಸವ ನಡೆಸುವುದಕ್ಕೆ ರಾಜ್ಯ ಸರ್ಕಾರ ವಿಘ್ನ ತಂದಿದೆ, ಸಿದ್ದರಾಮಯ್ಯ ಅವರದ್ದು ಹಿಂದು ವಿರೋಧಿ ಸರ್ಕಾರ ಇತ್ಯಾದಿ ಬರಹಗಳನ್ನು ಹಾಕಿ ಕರ್ನಾಟಕ ರಾಜ್ಯ ಬಿಜೆಪಿಯು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ ಯುಐ ವತಿಯಿಂದ ಮಂಗಳೂರಿನ ಬರ್ಕೆ ಠಾಣೆಗೆ ದೂರು ನೀಡಲಾಗಿದೆ.
ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ದೂರು ನೀಡಿದ್ದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಜ್ಯ ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಫೋಟೊ ಬಳಸಿ, ವಿಘ್ನ ವಿನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವಿಘ್ನ ಎಂಬ ಶೀರ್ಷಿಕೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಪೊಲೀಸರು ಧ್ವನಿವರ್ಧಕಕ್ಕೆ ರಾತ್ರಿ ವೇಳೆ ಅಡ್ಡಿ ಪಡಿಸಿದ ಪತ್ರಿಕಾ ಸುದ್ದಿಯನ್ನು ಬಳಸಿ ಅಣಕಿಸಿ ಬರೆದಿದೆ. 'ರಾಜ್ಯದಲ್ಲಿ ಅಧಿಕಾರದಲ್ಲಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿಘ್ನ ವಿನಾಯಕನ ಕಾರ್ಯಕ್ರಮಕ್ಕೆ ಅಡ್ಡಿ ತಂದು ಧ್ವನಿ ವರ್ಧಕಗಳನ್ನು ಹೊತ್ತೊಯ್ದಿದೆ.'


'ದಿನಕ್ಕೆ 5 ಬಾರಿ ಕೂಗುವ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ಮುಟ್ಟುವ ತಾಕತ್ತು ಈ ಹಿಂದೂ ವಿರೋಧಿ ಸಿದ್ದರಾಮಯ್ಯ ನವರಿಗಿಲ್ಲ. ಕಳೆದ ಬಾರಿ ಗಣೇಶನ ಮೂರ್ತಿಯನ್ನೇ ಬಂಧಿಸಿದ ಸರ್ಕಾರ, ಕೆರಗೋಡಿನಲ್ಲಿ ಭಗವಾಧ್ವಜ ಕಿತ್ತೆಸೆದಿದ್ದ ಸರ್ಕಾರ, ಮತ್ತೆ ಹಿಂದೂಗಳ ಮೇಲಿನ ಪ್ರಹಾರ ಮುಂದುವರೆಸಿದೆ.' ಎಂಬಿತ್ಯಾದಿ ಬರಹಗಳನ್ನು ಹಾಕಿದ್ದು ಇದು ಸಾರ್ವಜನಿಕರನ್ನು ಪ್ರಚೋದಿಸುವಂತಿದ್ದು ಗಲಭೆಗೆ ದುಷ್ಪ್ರೇರಣೆ ನೀಡುವಂತಿದೆ.
ಜನರಲ್ಲಿ ದ್ವೇಷದ ಭಾವನೆ ಹುಟ್ಟುಹಾಕಿ ಅಪರಾಧ ಕೃತ್ಯವೆಸಗುವಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಪ್ರಚೋದನಕಾರಿಯಾಗಿ ಫೇಸ್ ಬುಕ್ ಎಂಬ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಒಂದು ಸಮುದಾಯದ ಜನರನ್ನು ಮತ್ತೊಂದು ಸಮುದಾಯದ ಜನರ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಪೋಸ್ಟ್ ಮಾಡಿರುತ್ತಾರೆ. ರಾಜ್ಯ ಸರ್ಕಾರವು ನಿರ್ದಿಷ್ಟ ಅವಧಿಗೆ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳಿಗೆ ಡಿ.ಜೆ ಅಳವಡಿಸುವುದನ್ನು ನಿಷೇದಿಸಿ ಬೇರೆ ಸೌಂಡ್ ಸ್ವಿಸ್ಟಮ್ ಗೆ ಅವಕಾಶ ನೀಡಿದ್ದರೂ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿ ದ್ವೇಷ ಭಾವನೆ ಹುಟ್ಟುವಂತೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಒತ್ತಾಯಿಸಿದ್ದಾರೆ. ದೂರನ್ನು ಪರಿಗಣಿಸಿ ಬಿಎನ್ಎಸ್ 353 ಪ್ರಕಾರ ಕೇಸು ದಾಖಲಿಸಲಾಗಿದೆ
The National Students' Union of India (NSUI) in Dakshina Kannada has filed a police complaint against the Karnataka BJP’s social media post, accusing it of spreading communal hatred and provoking unrest under the guise of criticizing the Congress-led state government over Ganesh Chaturthi celebrations.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm