ಬ್ರೇಕಿಂಗ್ ನ್ಯೂಸ್
30-08-25 12:55 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯೊಬ್ಬರು ದೇಗುಲ ಪಕ್ಕದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಆಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು.
ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ವಿಳಾಸ ಪತ್ತೆಯಾಗಿದ್ದು ಪೊಲೀಸರು ಮನೆಯವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸೌಪರ್ಣಿಕಾ ನದಿ ಸಮೀಪ ಹಾಕಿರುವ ಸಿಸಿಟಿವಿಯಲ್ಲಿ ಮಹಿಳೆ ಈಜುತ್ತಿರುವುದು ಕಂಡುಬಂದಿದೆ. ಉತ್ತಮ ಈಜುಗಾರ್ತಿ ಎಂದು ಹೇಳಲಾಗುತ್ತಿರುವ ವಸುಧಾ ಅವರು ಬಹುದೂರ ಈಜಿ ದಡ ಸೇರಿದರೇ ಅಥವಾ ಉಕ್ಕಿ ಹರಿಯುತ್ತಿರುವ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದರೇ ಎಂಬ ಪ್ರಶ್ನೆ ಇದೆ. ಪೊಲೀಸರು ದೇವಸ್ಥಾನ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದಾರೆ.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ಕಾರ್ಯ ನಡೆಸಿದ್ದಾರೆ. ಮಹಿಳೆಯ ಪೋಷಕರು ಹಾಗೂ ಕುಟುಂಬ ಸದಸ್ಯರು ಸುದ್ದಿ ತಿಳಿದು ಕೊಲ್ಲೂರಿಗೆ ಆಗಮಿಸಿದ್ದಾರೆ. ವಸುಧಾ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ವಿವಾಹಿತರಾಗಿದ್ದರು. ಇತ್ತೀಚಿನ ದಿನಗಳಲ್ಲಿ ವಿವಿಧ ತೀರ್ಥ ಕ್ಷೇತ್ರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಒಂಟಿಯಾಗಿ ತೆರಳಿ ಧ್ಯಾನಾಸಕ್ತರಾಗುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ನಾಪತ್ತೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರಕಿದಲ್ಲಿ ಕೊಲ್ಲೂರು ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
A married woman from Bengaluru, who had visited the famous Kollur Mookambika Temple, has gone missing after entering the nearby Souparnika river for a dip. The incident has caused concern among locals and authorities.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am