ಬ್ರೇಕಿಂಗ್ ನ್ಯೂಸ್
30-08-25 12:55 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯೊಬ್ಬರು ದೇಗುಲ ಪಕ್ಕದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಆಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು.
ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ವಿಳಾಸ ಪತ್ತೆಯಾಗಿದ್ದು ಪೊಲೀಸರು ಮನೆಯವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸೌಪರ್ಣಿಕಾ ನದಿ ಸಮೀಪ ಹಾಕಿರುವ ಸಿಸಿಟಿವಿಯಲ್ಲಿ ಮಹಿಳೆ ಈಜುತ್ತಿರುವುದು ಕಂಡುಬಂದಿದೆ. ಉತ್ತಮ ಈಜುಗಾರ್ತಿ ಎಂದು ಹೇಳಲಾಗುತ್ತಿರುವ ವಸುಧಾ ಅವರು ಬಹುದೂರ ಈಜಿ ದಡ ಸೇರಿದರೇ ಅಥವಾ ಉಕ್ಕಿ ಹರಿಯುತ್ತಿರುವ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದರೇ ಎಂಬ ಪ್ರಶ್ನೆ ಇದೆ. ಪೊಲೀಸರು ದೇವಸ್ಥಾನ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದಾರೆ.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ಕಾರ್ಯ ನಡೆಸಿದ್ದಾರೆ. ಮಹಿಳೆಯ ಪೋಷಕರು ಹಾಗೂ ಕುಟುಂಬ ಸದಸ್ಯರು ಸುದ್ದಿ ತಿಳಿದು ಕೊಲ್ಲೂರಿಗೆ ಆಗಮಿಸಿದ್ದಾರೆ. ವಸುಧಾ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ವಿವಾಹಿತರಾಗಿದ್ದರು. ಇತ್ತೀಚಿನ ದಿನಗಳಲ್ಲಿ ವಿವಿಧ ತೀರ್ಥ ಕ್ಷೇತ್ರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಒಂಟಿಯಾಗಿ ತೆರಳಿ ಧ್ಯಾನಾಸಕ್ತರಾಗುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ನಾಪತ್ತೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರಕಿದಲ್ಲಿ ಕೊಲ್ಲೂರು ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
A married woman from Bengaluru, who had visited the famous Kollur Mookambika Temple, has gone missing after entering the nearby Souparnika river for a dip. The incident has caused concern among locals and authorities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm