ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am