ಬ್ರೇಕಿಂಗ್ ನ್ಯೂಸ್
30-08-25 11:08 pm Mangalore Correspondent ಕರಾವಳಿ
ಮಂಗಳೂರು, ಆ.30 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಚಿನ್ನಯ್ಯ ಹೇಳಿಕೆಯಲ್ಲಿ ತಿಳಿಸಿರುವಂತೆ, ಸೌಜನ್ಯಾ ಪರ ಹೋರಾಟಗಾರ ಜಯನ್ ಅವರ ಬೆಂಗಳೂರಿನ ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ವಿಚಾರಣೆ ವೇಳೆ ಚಿನ್ನಯ್ಯ ಜಯಂತ್ ಹೆಸರು ಬಾಯ್ಬಿಟ್ಟಿದ್ದು ಇದರಂತೆ ಬೆಂಗಳೂರಿನ ಮಲ್ಲಸಂದ್ರದಲ್ಲಿರುವ ಮನೆಗೆ ಎಸ್ಐಟಿ ಅಧಿಕಾರಿಗಳು ಶನಿವಾರ ತೆರಳಿದ್ದಾರೆ. ಮಲ್ಲಸಂದ್ರದಲ್ಲಿರುವ ಜಯಂತ್ ಅವರ ಬಾಡಿಗೆ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಜಯಂತ್ ಬಾಡಿಗೆ ಮನೆಯಲ್ಲಿ ಚಿನ್ನಯ್ಯ ಏಪ್ರಿಲ್ ತಿಂಗಳಲ್ಲಿ ಕೆಲವು ದಿನಗಳ ಕಾಲ ಉಳಿದುಕೊಂಡಿದ್ದ ಎನ್ನಲಾಗ್ತಿದೆ.
ಇದೇ ವೇಳೆ, ಖಾಸಗಿ ವಾಹಿನಿಗೆ ಮಾಹಿತಿ ಹಂಚಿಕೊಂಡಿರುವ ಜಯಂತ್, ಬೆಂಗಳೂರಿನಲ್ಲಿ ಮಗ ಮತ್ತು ಮಗಳು ಇದ್ದಾರೆ. ಚಿನ್ನಯ್ಯನ ಜೊತೆಗೆ ಬೆಂಗಳೂರು ತೆರಳಿದ್ದಾಗ ಎರಡು ದಿನ ನಮ್ಮ ಜೊತೆಗೆ ಇದ್ದ. ನಮ್ಮ ಮನೆಯಲ್ಲೇ ಉಳಿಯುವಂತೆ ಹೇಳಿದ್ದೆವು. ಆನಂತರ, ದೆಹಲಿಗೂ ಹೋಗಿದ್ದೆವು. ಮಟ್ಟೆಣ್ಣನವರ್, ಸುಜಾತಾ, ನಾನು ಮತ್ತು ಚಿನ್ನಯ್ಯ ಸೇರಿ ದೆಹಲಿಗೆ ಹೋಗಿದ್ದೆವು. ದೆಹಲಿಯಲ್ಲಿ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಲು ಹೋಗಿದ್ದೆವು. ಆದರೆ ಅದು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.
ನಾವು ದೆಹಲಿಗೆ ಹೋಗಿದ್ದು ನಿಜ. ಬೆಂಗಳೂರಿನಲ್ಲಿ ಉಳಿದುಕೊಂಡಿದ್ದೂ ನಿಜ. ಆ ವೇಳೆಗೆ, ವಿಷಯ ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ. ಆದರೆ ಚಿನ್ನಯ್ಯನೇ ತಲೆಬುರುಡೆ ತಂದಿರೋದು. ಆತ ಹೆಣ ಹೂತು ಹಾಕಿದ್ದು ಸತ್ಯ. ಈಗ ಮಾತ್ರ ಆತ ನಡೆದುಕೊಳ್ಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಈಗ ತಲೆಬುರುಡೆ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾನೆ. ಮೊನ್ನೆ ತಿಮರೋಡಿ ತೋಟದಲ್ಲಿ ಇತ್ತೆಂದು ಹೇಳಿದ್ದ. ಲ್ಯಾಬ್ ನಲ್ಲಿ ತಂದಿದ್ದರೆ ಎಲ್ಲಿಂದ ಅಂತ ಹೇಳಲಿ ಮತ್ತು ಆ ಲ್ಯಾಬ್ ನವರನ್ನು ತನಿಖೆ ಮಾಡಲಿ. ನಾವು ಬೆಂಗಳೂರಿನಲ್ಲಿ ಒಟ್ಟಿಗೆ ಉಳಿದಿದ್ದು ಅಪರಾಧ ಅಂತಾದರೆ ಅದಕ್ಕೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಜಯನ್ ಹೇಳಿದ್ದಾರೆ.
In a fresh development in the Dharmasthala human remains burial case, SIT officials probing the allegations reportedly took key accused Chinnayya from Beltangady to Bengaluru for a spot inspection. As per Chinnayya's statement, the SIT team visited the residence of activist Jayan in Malleshwaram, Bengaluru, to verify certain details.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm