ಬ್ರೇಕಿಂಗ್ ನ್ಯೂಸ್
30-08-25 11:08 pm Mangalore Correspondent ಕರಾವಳಿ
ಮಂಗಳೂರು, ಆ.30 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಚಿನ್ನಯ್ಯ ಹೇಳಿಕೆಯಲ್ಲಿ ತಿಳಿಸಿರುವಂತೆ, ಸೌಜನ್ಯಾ ಪರ ಹೋರಾಟಗಾರ ಜಯನ್ ಅವರ ಬೆಂಗಳೂರಿನ ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ವಿಚಾರಣೆ ವೇಳೆ ಚಿನ್ನಯ್ಯ ಜಯಂತ್ ಹೆಸರು ಬಾಯ್ಬಿಟ್ಟಿದ್ದು ಇದರಂತೆ ಬೆಂಗಳೂರಿನ ಮಲ್ಲಸಂದ್ರದಲ್ಲಿರುವ ಮನೆಗೆ ಎಸ್ಐಟಿ ಅಧಿಕಾರಿಗಳು ಶನಿವಾರ ತೆರಳಿದ್ದಾರೆ. ಮಲ್ಲಸಂದ್ರದಲ್ಲಿರುವ ಜಯಂತ್ ಅವರ ಬಾಡಿಗೆ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಜಯಂತ್ ಬಾಡಿಗೆ ಮನೆಯಲ್ಲಿ ಚಿನ್ನಯ್ಯ ಏಪ್ರಿಲ್ ತಿಂಗಳಲ್ಲಿ ಕೆಲವು ದಿನಗಳ ಕಾಲ ಉಳಿದುಕೊಂಡಿದ್ದ ಎನ್ನಲಾಗ್ತಿದೆ.
ಇದೇ ವೇಳೆ, ಖಾಸಗಿ ವಾಹಿನಿಗೆ ಮಾಹಿತಿ ಹಂಚಿಕೊಂಡಿರುವ ಜಯಂತ್, ಬೆಂಗಳೂರಿನಲ್ಲಿ ಮಗ ಮತ್ತು ಮಗಳು ಇದ್ದಾರೆ. ಚಿನ್ನಯ್ಯನ ಜೊತೆಗೆ ಬೆಂಗಳೂರು ತೆರಳಿದ್ದಾಗ ಎರಡು ದಿನ ನಮ್ಮ ಜೊತೆಗೆ ಇದ್ದ. ನಮ್ಮ ಮನೆಯಲ್ಲೇ ಉಳಿಯುವಂತೆ ಹೇಳಿದ್ದೆವು. ಆನಂತರ, ದೆಹಲಿಗೂ ಹೋಗಿದ್ದೆವು. ಮಟ್ಟೆಣ್ಣನವರ್, ಸುಜಾತಾ, ನಾನು ಮತ್ತು ಚಿನ್ನಯ್ಯ ಸೇರಿ ದೆಹಲಿಗೆ ಹೋಗಿದ್ದೆವು. ದೆಹಲಿಯಲ್ಲಿ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಲು ಹೋಗಿದ್ದೆವು. ಆದರೆ ಅದು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.
ನಾವು ದೆಹಲಿಗೆ ಹೋಗಿದ್ದು ನಿಜ. ಬೆಂಗಳೂರಿನಲ್ಲಿ ಉಳಿದುಕೊಂಡಿದ್ದೂ ನಿಜ. ಆ ವೇಳೆಗೆ, ವಿಷಯ ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ. ಆದರೆ ಚಿನ್ನಯ್ಯನೇ ತಲೆಬುರುಡೆ ತಂದಿರೋದು. ಆತ ಹೆಣ ಹೂತು ಹಾಕಿದ್ದು ಸತ್ಯ. ಈಗ ಮಾತ್ರ ಆತ ನಡೆದುಕೊಳ್ಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಈಗ ತಲೆಬುರುಡೆ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾನೆ. ಮೊನ್ನೆ ತಿಮರೋಡಿ ತೋಟದಲ್ಲಿ ಇತ್ತೆಂದು ಹೇಳಿದ್ದ. ಲ್ಯಾಬ್ ನಲ್ಲಿ ತಂದಿದ್ದರೆ ಎಲ್ಲಿಂದ ಅಂತ ಹೇಳಲಿ ಮತ್ತು ಆ ಲ್ಯಾಬ್ ನವರನ್ನು ತನಿಖೆ ಮಾಡಲಿ. ನಾವು ಬೆಂಗಳೂರಿನಲ್ಲಿ ಒಟ್ಟಿಗೆ ಉಳಿದಿದ್ದು ಅಪರಾಧ ಅಂತಾದರೆ ಅದಕ್ಕೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಜಯನ್ ಹೇಳಿದ್ದಾರೆ.
In a fresh development in the Dharmasthala human remains burial case, SIT officials probing the allegations reportedly took key accused Chinnayya from Beltangady to Bengaluru for a spot inspection. As per Chinnayya's statement, the SIT team visited the residence of activist Jayan in Malleshwaram, Bengaluru, to verify certain details.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm